
ಬೆಂಗಳೂರು(ಏ.01): ನಾನು ಹಿಂದೂ ಅಲ್ಲ, ಭಾರತೀಯ(Indian) ಎಂದು ವಿದ್ಯುಕ್ತವಾಗಿ ಘೋಷಿಸುತ್ತೇನೆ. ಲಿಂಗಾಯತ ಸಮುದಾಯಕ್ಕೆ(Lingayat Community) ಸೇರಿದ್ದು, ನಾನು ಬಸವಣ್ಣನವರ ಅನುಯಾಯಿ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಮತ್ತು ಸಾಹಿತಿ ಕುಂ.ವೀರಭದ್ರಪ್ಪ(K Veerabhadrappa) ತಿಳಿಸಿದ್ದಾರೆ.
ಗುರುವಾರ ಗಾಂಧಿಭವನದಲ್ಲಿ ಲೋಕನಾಯಕ ಜೆ.ಪಿ ವಿಚಾರ ವೇದಿಕೆ ಹಮ್ಮಿಕೊಂಡಿದ್ದ ‘ಸರ್ವ ಜನಾಂಗದ ಶಾಂತಿಯ ತೋಟ-ಒಂದು ಭಾವೈಕ್ಯತೆಯ ಚರ್ಚೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲಿಂಗಾಯತ ಸಮುದಾಯಕ್ಕೆ ಸೇರಿದವನಾದ ನಾನು ಬಸವಣ್ಣ(Basavanna) ಅವರ ಅನುಯಾಯಿಯಾಗಿದ್ದೇನೆ. ಹಿಂದೂ(Hindu) ಎಂಬ ಪದವು 1824ರಲ್ಲಿ ಬಂದಿದೆ. ಈ ಪದ ಅತ್ಯಂತ ಅಪಾಯಕಾರಿಯಾಗಿದೆ. ದೇಶದಲ್ಲಿ(India) 12 ಸಾವಿರ ಭಾಷೆ, ಸಂಸ್ಕೃತಿಗಳಿವೆ. ಈ ರೀತಿಯ ವೈವಿಧ್ಯತೆ ವಿಶ್ವದ ಬೇರೆ ದೇಶದಲ್ಲಿ ಕಾಣುವುದಿಲ್ಲ ಎಂದು ಹೇಳಿದರು.
Mysore ಹಿಂದೂ ಧರ್ಮ ಮಾತ್ರ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಕೆಲಸವಾಗುತ್ತಿದೆ
ವೈವಿಧ್ಯತೆ, ಭಾವೈಕ್ಯತೆ ಮತ್ತು ಸಾಮರಸ್ಯವು ಭಾರತದ ಹೆಗ್ಗುರುತು. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್ ತುಂಬಾ ‘ಸಜ್ಜನರು’. ಮೈಮೇಲೆ ದೆವ್ವ ಬಂದರೆ ಮುಸ್ಲಿಂ(Muslim) ವಿರೋಧಿ ಹೇಳಿಕೆ ನೀಡುತ್ತಾರೆ. ಮಾಧ್ಯಮಗಳ ಮುಂದೆ ಮುಸ್ಲಿಂ ಸಮುದಾಯವನ್ನು ಟೀಕಿಸಿ ಪಾಕಿಸ್ತಾನಕ್ಕೆ(Pakistan) ಹೋಗುವಂತೆ ಹೇಳುತ್ತಾರೆ. ಅದೇನು ಡಸ್ಟ್ಬಿನಾ? ಅದು ನಮ್ಮ ದಾಯಾದಿ ರಾಷ್ಟ್ರ. ಇತ್ತೀಚಿಗಿನ ಬೆಳವಣಿಗೆಗಳು ಅತ್ಯಂತ ಅಪಾಯಕಾರಿ ಎಂದರು.
ನಿವೃತ್ತ ನ್ಯಾ. ಎಚ್.ಎನ್. ನಾಗಮೋಹನ ದಾಸ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದನಾಥ ಸ್ವಾಮೀಜಿ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಆರ್ಚ್ ಡಯಾಸಿಸ್ ಕಮ್ಯುನಿಕೇಷನ್ ಸೆಂಟ್ನ ನಿರ್ದೇಶಕ ಫಾ. ಸಿರಿಲ್ ವಿಕ್ಟರ್ ಇತರರಿದ್ದರು.
ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು: ಸಿದ್ದರಾಮಯ್ಯ
ಮಂಗಳೂರು: ಕಾಂಗ್ರೆಸ್ (Congress) ಪಂಚ ರಾಜ್ಯ ಚುನಾವಣೆ ಬಳಿಕ ಸಾಫ್ಟ್ ಹಿಂದುತ್ವದ (Hinduism) ಕಡೆಗೆ ವಾಲುತ್ತಿದೆ ಎಂಬ ಚರ್ಚೆಗೆ ಸಂಬಂಧಿಸಿ ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು,, ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು ಎಂದು ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡ್ತೇನೆ ಅಂತ ಹೇಳಿದ್ದರು.
'ಯಾವ ಧರ್ಮದವರೂ ಕೋಮುವಾದ ಮಾಡಬಾರದು':
ಹಿಜಾಬ್ (Hijab) ವಿರೋಧಿಸಿ ಮುಸ್ಲಿಂ (Muslim) ಸಂಘಟನೆಗಳ ಬಂದ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ, ಕೋರ್ಟ್ ನಿರ್ಧಾರ ವಿರೋಧಿಸಬಾರದು. ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುವ ಕೆಲಸ ಆಗಲಿ ಎಂದಿದ್ದರು.
ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ:
ಶಾಲೆಗಳಲ್ಲಿ ಭಗವದ್ಗೀತೆ (Bhagavad Gita) ಕಲಿಸೋ ಚಿಂತನೆ ವಿಚಾರ ಸಂಬಂಧ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನೈತಿಕ ಶಿಕ್ಷಣ ಕಲಿಸೋಕೆ ನಮ್ಮ ಯಾವುದೇ ತಕರಾರು ಇಲ್ಲ. ನಾವು ಸಂವಿಧಾನದ ಜಾತ್ಯಾತೀತ ತತ್ವಗಳನ್ನು ನಂಬುತ್ತೇವೆ. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನ ಹೇಳಿಕೊಟ್ಟರೂ ನಮ್ಮ ವಿರೋಧ ಇಲ್ಲ. ಆದ್ರೆ ಮಕ್ಕಳಿಗೆ ಅಗತ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು.
ಯಾರು ಏನೇ ಹೇಳಿದರೂ ಧರ್ಮ ದೊಡ್ಡದಾಗಿ ಬೆಳೆಸಿ: ಯದುವೀರ
ಭಗವದ್ಗೀತೆ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ, ಗುಜರಾತ್ ನಲ್ಲಿ ಮಾಡಿದ್ದಾರೆ ಅಷ್ಟೇ. ಭಗವದ್ಗೀತೆ ಮನೆಯಲ್ಲಿ ಹೇಳಿಕೊಡ್ತಾರೆ, ದೇವರ ಬಗ್ಗೆ ಹೇಳ್ತಾರೆ. ರಾಮಾಯಣ, ಮಹಾಭಾರತ ಎಲ್ಲಾನೂ ಮನೆಯಲ್ಲಿ ಹೇಳಿ ಕೊಡ್ತಾರೆ. ನೈತಿಕ ಶಿಕ್ಷಣ ಬೇಕು, ಆದ್ರೆ ಸಂವಿಧಾನಕ್ಕೆ ವಿರುದ್ದವಾಗಿ ಯಾವುದೂ ನಡೀಬಾರದು. ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದಾದರೂ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರೋ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ನಾನು ಎಂದು ತಿಳಿಸಿದ್ದರು.
'ದಿ ಕಾಶ್ಮೀರ್ ಫೈಲ್' (The Kashmir Files) ಚಿತ್ರ ಕನ್ನಡಕ್ಕೆ ಡಬ್ ಮಾಡುವ ವಿಚಾರದಲ್ಲಿ ಮಾತನಾಡಿದ ಅವರು, ಸಿನಿಮಾ ಮಾಡಿ ತೋರಿಸೋದನ್ನ ಬೇಡ ಅನ್ನಲ್ಲ, ಆದರೆ ಸತ್ಯ ತೋರಿಸಲಿ. ಕಾಶ್ಮೀರದ ಉಗ್ರರ ಕೃತ್ಯ, ಪಂಡಿತರ ಜೊತೆಗೆ ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಹೇಳಬೇಕು. ಆಗ ಯಾರ ಸರ್ಕಾರ ಇತ್ತು, ಏನ್ ಮಾಡಿತ್ತು ಸರ್ಕಾರ ಅಂತ ತೋರಿಸಬೇಕು. ಗುಜರಾತ್ ಘಟನೆ, ಲಖಿನ್ ಪುರ್ ಘಟನೆ ಎಲ್ಲಾನೂ ತೋರಿಸಬೇಕು. ನಾನು ಸಿನಿಮಾಗೆ ಹೋಗಲ್ಲ, ಥಿಯೇಟರ್ ಹೋಗಿ ಸಿನಿಮಾ ನೋಡಲ್ಲ. ಬಹಳ ಸಿನಿಮಾ ನೋಡಲ್ಲ, ಹಾಗೇನೇ ಕಾಶ್ಮೀರ್ ಫೈಲ್ ಕೂಡ ನೋಡಲ್ಲ ಎಂದು ಹೇಳಿದ್ದರು.
ಭಗವದ್ಗೀತೆ, ಖುರಾನ್ನಲ್ಲಿ ಕೆಟ್ಟಿದ್ದು ಇದ್ದರೆ ಸಮುದ್ರಕ್ಕೆ ಹಾಕಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ