
ನವದೆಹಲಿ(ಜ.14): ರಾಮಮಂದಿರ ಉದ್ಘಾಟನೆ ವೇಳೆ ಗೋದ್ರಾ ಥರದ ಘಟನೆ ಹೇಳಿಕೆ ವಿಚಾರ ಬಿಜೆಪಿ ನಾಯಕರ ಸವಾಲು ಸ್ವೀಕರಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಂಪರು ಪರೀಕ್ಷೆಗೆ ಒಳಪಡಲು ನಾನು ಸಿದ್ಧ ಎಂದಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಎದುರಿಸಲು ನಾನು ಸಿದ್ಧನಿದ್ದು, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಮಂಪರು ಪರೀಕ್ಷೆಗೆ ಒಳಪಡಬೇಕು ಎಂದು ಹೇಳಿದ್ದಾರೆ.
ಸಂಸತ್ ದಾಳಿ ಮಾಸ್ಟರ್ಮೈಂಡ್ ಮೈಸೂರಿನ ಮನೋರಂಜನ್..!
ಬಿಜೆಪಿ ಸರ್ಕಾರ ಇದ್ದಾಗ ₹40,000 ಕೋಟಿ ಹಗರಣ ನಡೆದಿದೆ ಎಂದು ಯತ್ನಾಳ್ ಹೇಳಿದ್ದಾರೆ, ಹೀಗಾಗೀ ನನ್ನ ಮತ್ತು ವಿಜಯೇಂದ್ರ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ. ಆದರೆ, ಮಂಪರು ಪರೀಕ್ಷೆ ಲೈವ್ ಆಗಬೇಕು, ಟಿವಿಯಲ್ಲಿ ಪ್ರಸಾರ ಮಾಡಬೇಕು ಎಂದು ಸವಾಲು ಎಸೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ