ಪರೀಕ್ಷೆ ಎದುರಿಸಲು ನಾನು ಸಿದ್ದನಿದ್ದು, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಮಂಪರು ಪರೀಕ್ಷೆಗೆ ಒಳಪಡಬೇಕು: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್
ನವದೆಹಲಿ(ಜ.14): ರಾಮಮಂದಿರ ಉದ್ಘಾಟನೆ ವೇಳೆ ಗೋದ್ರಾ ಥರದ ಘಟನೆ ಹೇಳಿಕೆ ವಿಚಾರ ಬಿಜೆಪಿ ನಾಯಕರ ಸವಾಲು ಸ್ವೀಕರಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮಂಪರು ಪರೀಕ್ಷೆಗೆ ಒಳಪಡಲು ನಾನು ಸಿದ್ಧ ಎಂದಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಎದುರಿಸಲು ನಾನು ಸಿದ್ಧನಿದ್ದು, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಮಂಪರು ಪರೀಕ್ಷೆಗೆ ಒಳಪಡಬೇಕು ಎಂದು ಹೇಳಿದ್ದಾರೆ.
ಸಂಸತ್ ದಾಳಿ ಮಾಸ್ಟರ್ಮೈಂಡ್ ಮೈಸೂರಿನ ಮನೋರಂಜನ್..!
ಬಿಜೆಪಿ ಸರ್ಕಾರ ಇದ್ದಾಗ ₹40,000 ಕೋಟಿ ಹಗರಣ ನಡೆದಿದೆ ಎಂದು ಯತ್ನಾಳ್ ಹೇಳಿದ್ದಾರೆ, ಹೀಗಾಗೀ ನನ್ನ ಮತ್ತು ವಿಜಯೇಂದ್ರ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ. ಆದರೆ, ಮಂಪರು ಪರೀಕ್ಷೆ ಲೈವ್ ಆಗಬೇಕು, ಟಿವಿಯಲ್ಲಿ ಪ್ರಸಾರ ಮಾಡಬೇಕು ಎಂದು ಸವಾಲು ಎಸೆದರು.