ರಾಜಕೀಯದಲ್ಲಿ ನಾನು ಇನ್ನೂ ಅಂಬೆಗಾಲು ಇಡುತ್ತಿರುವೆ: ಬೆಳ್ಳಿ ಕಿರೀಟವನ್ನು ಮಠಕ್ಕೆ ವಾಪಸ್‌ ಕೊಟ್ಟ ಬಿವೈವಿ

Kannadaprabha News, Ravi Janekal |   | Kannada Prabha
Published : Feb 18, 2026, 05:25 AM IST
I am Still a Toddler in Politics BY Vijayendra Returns Silver Crown to Matha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಾಲನಹಳ್ಳಿ ಮಠದಲ್ಲಿ ಶಿವಗಂಗೋತ್ರಿ ಪ್ರಶಸ್ತಿ ಸ್ವೀಕರಿಸಿ, ತಾವಿನ್ನೂ ರಾಜಕೀಯದಲ್ಲಿ ಅಂಬೆಗಾಲು ಇಡುತ್ತಿರುವುದಾಗಿ ಹೇಳಿದರು. ಈ ಪ್ರಶಸ್ತಿಯು ತಮ್ಮ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿ ತಮಗೆ ನೀಡಿದ ಬೆಳ್ಳಿ ಕಿರೀಟವನ್ನು ಮಠಕ್ಕೆ ಹಿಂತಿರುಗಿಸಿದರು.

ದಾಬಸ್‍ಪೇಟೆ (ಫೆ.18): ರಾಜಕೀಯದಲ್ಲಿ ನಾನಿನ್ನೂ ಅಂಬೆಗಾಲು ಇಡುತ್ತಿದ್ದೇನೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲನಹಳ್ಳಿ ಮಠದಲ್ಲಿ ಮಂಗಳವಾರ ಶ್ರೀಮಠದಿಂದ ನೀಡಲಾದ ಶಿವಗಂಗೋತ್ರಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. 

ಇದನ್ನೂ ಓದಿ: 2028ಕ್ಕೆ ಸಿದ್ದರಾಮಯ್ಯ ಅಲ್ಲ, ಡಿಕೆಶಿನೂ ಅಲ್ಲ, ವಿಜಯೇಂದ್ರ ಸಿಎಂ: ಬಿಜೆಪಿ ಮುಖಂಡನ ಭವಿಷ್ಯವಾಣಿ ನಿಜವಾಗುತ್ತಾ? 

ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡುತ್ತಿದ್ದೇನೆ. ನಾನು ಇದನ್ನು ಪ್ರಶಸ್ತಿ ಎನ್ನುವುದಿಲ್ಲ, ನನ್ನ ರಾಜಕೀಯ ಜೀವನಕ್ಕೆ ಕಿರೀಟ ಎಂದು ಭಾವಿಸಿಸುತ್ತೇನೆ. ನಾನು ಇನ್ನೂ ರಾಜಕೀಯದಲ್ಲಿ ಅಂಬೆಕಾಲು ಇಡುತ್ತಿದ್ದು, ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಿದೆ ಎಂದರು.

ಈ ಸಂದರ್ಭದಲ್ಲಿ ಶಿವಗಂಗೋತ್ರಿ ಪ್ರಶಸ್ತಿಯನ್ನು ಮಾತ್ರ ಸ್ವೀಕರಿಸುತ್ತೇನೆ. ಬೆಳ್ಳಿ ಕಿರೀಟವನ್ನು ಮಠದ ಕಾರ್ಯಗಳಿಗೆ ನೀಡುತ್ತೇನೆ, ಪೂಜ್ಯರು ಸ್ವೀಕರಿಸಬೇಕೆಂದು ಮನವಿ ಮಾಡಿ ಮಠಕ್ಕೆ ಹಿಂತಿರುಗಿಸಿದರು. ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಹತ್ತಕ್ಕೂ ಹೆಚ್ಚು ಮಠಾಧೀಶರು ವಿಜಯೇಂದ್ರ ಅವರಿಗೆ ಹೂವು ಸುರಿದು ಮಂತ್ರಪಠಣೆ ಮಾಡಿ ಆಶೀರ್ವದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸಲು ಡಿಕೆಶಿ ಟೀಂ ಮನವಿ
₹25,000 ದಂಡದ ಆದೇಶ ಪ್ರಶ್ನಿಸಿದ್ದಅರ್ಜಿ ವಾಪಸ್‌ ಪಡೆದ ಮಹೇಶ್‌ ಜೋಶಿ | ಏನಿದು ಪ್ರಕರಣ?