
ಬೆಂಗಳೂರು : ಇತ್ತೀಚೆಗೆ ತುಮಕೂರಿನ ಸಿದ್ಧಗಂಗಾ ಶ್ರೀ ದೈವಾಧೀನರಾಗಿರುವುದು ಮತ್ತು ಪುಲ್ವಾಮಾ ಘಟನೆಯಲ್ಲಿ ಯೋಧರು ಹುತ್ಮಾರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
22 ಕ್ಷೇತ್ರ ಬಿಜೆಪಿಗೆ : ಬಿ.ಎಸ್. ಯಡಿಯೂರಪ್ಪ ಪ್ರತಿಜ್ಞೆ
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.27ರಂದು ತಮ್ಮ ಹುಟ್ಟುಹಬ್ಬವಿದೆ. ಈ ಬಾರಿ ಆಚರಿಸದಿರಲು ತೀರ್ಮಾನಿಸಿದ್ದೇನೆ. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹುಟ್ಟುಹಬ್ಬದ ಅಂಗವಾಗಿ ಯಾವುದೇ ಕಾರ್ಯಕ್ರಮ ಮಾಡಿ ಸಿಹಿ ಹಂಚಿ ಸಂಭ್ರಮಿಸಬಾರದು ಎಂದು ಮನವಿ ಮಾಡಿದರು.
ಲೋಕಸಭೆ ಎಲೆಕ್ಷನ್ 2019: ಶ್ರಿರಾಮುಲುಗೆ ಹೊಸ ಟಾಸ್ಕ್ ಕೊಟ್ಟ BSY
ಹುಟ್ಟುಹಬ್ಬದ ದಿನ ತಾವು ಚಿತ್ರದುರ್ಗಕ್ಕೆ ಭೇಟಿ ನೀಡುತ್ತಿದ್ದು, ವಿಶೇಷ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಾಗಿ ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ