
ಕೋಲಾರ (ನ.24): ನಾನೂ ಊಹೆಯಲ್ಲೂ ಇಲ್ಲ, ಭ್ರಮೆಯಲ್ಲೂ ಇಲ್ಲ, ಮುಖ್ಯಮಂತ್ರಿ ಅವಕಾಶ ಸಿಕ್ಕಾಗ ಲೂಟಿ ಮಾಡಬೇಕು ಅನ್ನುವುದೇ ಕಾಂಗ್ರೆಸ್ ಅವರ ಉದ್ದೇಶ, ಈಗ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ಶನಿವಾರ ನಡೆದ ನಮ್ಮ ಪಕ್ಷದ ೨೫ನೇ ವರ್ಷದ ಕಾರ್ಯಕ್ರಮದಲ್ಲಿ ನಾನು ನಮ್ಮ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ಕ್ರಾಂತಿ ಅಥವಾ ಹಗಲು ಕನಸಿನ ಬಗ್ಗೆ ಹೇಳಿಲ್ಲ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳಿದರು. ಯಾವುದೇ ಪಕ್ಷ, ಯಾವುದೇ ನಾಯಕರು ಏನು ತೀರ್ಮಾನ ಮಾಡುತ್ತಾರೋ ಎಂಬುದನ್ನು ನಾವು ಊಹೆ ಮಾಡಲಿಕ್ಕಾಗಲ್ಲ, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಮೈ ಮರೆಯದೆ ಕೆಲಸ ಮಾಡುವಂತೆ ಕರೆ ನೀಡಿದ್ದೇನೆ. ಏನೂ ಬೇಕಾದರೂ ಆಗಬಹುದು ಎಂದು ಹೇಳಿದ್ದೇ ಹೊರತು, ಸರ್ಕಾರ ೬ ತಿಂಗಳಲ್ಲಿ ಬೀಳುತ್ತೆ ಎಂದು ನಾನು ಹೇಳಿಲ್ಲ ಎಂದು ತಿಳಿಸಿದರು.
ಈಗಿನ ಸರ್ಕಾರ ೧೩೬ ಸ್ಥಾನ ಗೆದ್ದರೂ ಸಹ ಗ್ಯಾರಂಟಿ ಘೋಷಣೆ ಮಾಡಿ ಅವುಗಳನ್ನು ಬಿಟ್ಟು ಮುಂದೆ ಹೋಗಿಲ್ಲ, ಗ್ಯಾರಂಟಿಯಿಂದ ಜನ ನೆಮ್ಮದಿಯಿಂದ ಬದುಕುತ್ತಿದ್ದಾರಾ, ಮೆಕ್ಕೆಜೋಳ ಬೆಳೆದ ರೈತರ ಪರಿಸ್ಥಿತಿ ಏನು, ಕೋಲಾರದ ರೈತರ ಜೀವನ ಸುಧಾರಿಸಿದೆಯೇ ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ