ನಾವು ಮನವರಿಕೆ ಮಾಡೋದಲ್ಲ, ಅವರಿಗೆ ಆಗಬೇಕು: ಬರ ಪರಿಸ್ಥಿತಿ ಬಗ್ಗೆ ಬಿಜೆಪಿ ನಾಯಕರ ಆರೋಪಕ್ಕೆ ಜಾರಕಿಹೊಳಿ ತಿರುಗೇಟು

Published : Oct 09, 2023, 09:26 PM IST
ನಾವು ಮನವರಿಕೆ ಮಾಡೋದಲ್ಲ, ಅವರಿಗೆ ಆಗಬೇಕು: ಬರ ಪರಿಸ್ಥಿತಿ ಬಗ್ಗೆ ಬಿಜೆಪಿ ನಾಯಕರ ಆರೋಪಕ್ಕೆ ಜಾರಕಿಹೊಳಿ ತಿರುಗೇಟು

ಸಾರಾಂಶ

ಕೇಂದ್ರ ಬರ ಅಧ್ಯಯನ ತಂಡಕ್ಕೆ ಬರ ಪರಿಸ್ಥಿತಿ ಮನವರಿಕೆ ಮಾಡುವಲ್ಲಿ ಸರ್ಕಾರ ವಿಫಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ನಾವು ಮನವರಿಕೆ ಮಾಡೋದಲ್ಲ ಅವರಿಗೆ ಆಗಬೇಕು. ನಾವು ಹೇಳಿದ್ರೆ ವರದಿ ಕೊಡಲ್ಲ, ವಸ್ತು ಸ್ಥಿತಿ ಇದ್ರೆ ಮಾತ್ರ ವರದಿ ಕೊಡ್ತಾರೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಅ.9): ಶಾಸಕರ ಬಳಿ ಮಾತನಾಡಿ ಸದ್ಯದಲ್ಲೇ  ಚಿಕ್ಕೋಡಿಯಲ್ಲೂ ಕೆಡಿಪಿ ಸಭೆ ಮಾಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲೂ ಕೆಡಿಪಿ ಸಭೆ ಮಾಡೋದಾಗಿ ಹೇಳಿದ್ದ ಸಚಿವ ಸತೀಶ್ ಜಾರಕಿಹೊಳಿ. ಆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ. ಶೀಘ್ರವೇ ಶಾಸಕರ ಜೊತೆ ಮಾತನಾಡಿ ದಿನಾಂಕ ನಿಗದಿಪಡಿಸಿ ಚಿಕ್ಕೋಡಿಯಲ್ಲಿಯೂ ಸಭೆ ಮಾಡುತ್ತೇನೆ ಎಂದರು.

ರೈತರ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

ಕೇಂದ್ರ ಬರ ಅಧ್ಯಯನ ತಂಡ ಚಿಕ್ಕೋಡಿ ಉಪವಿಭಾಗಕ್ಕೆ ಭೇಟಿ ನೀಡದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಬರಪೀಡಿತ ತಾಲೂಕುಗಳ ಘೋಷಣೆಯಾಗಿದೆ, ಇಲ್ಲಿ ಬರಬೇಕು ಅಂತೇನಿಲ್ಲ. ಬರ ಅಧ್ಯಯನ ತಂಡ 194 ತಾಲೂಕುಗಳಿಗೂ ಹೋಗಲ್ಲ, ರಾಂಡಮ್ ಆಗಿ ಚೆಕ್ ಮಾಡ್ತಾರೆ. ಲಿಮಿಟೆಡ್ ಎಂಟರಿಂದ ಹತ್ತು ಜಿಲ್ಲೆಗಳಲ್ಲಿ ಬರ ಅಧ್ಯಯನ ತಂಡ ಹೋಗಿದೆ. ಬರದೇ ಹೋದ್ರೆ ತಾರತಮ್ಯ ಅಂತೇನಿಲ್ಲ, ಗೋಕಾಕ್, ಮೂಡಲಗಿಗೂ ಬಂದಿಲ್ಲ. ಅದಕ್ಕೂ ಇದಕ್ಕೂ ಲಿಂಕ್ ಮಾಡೋದು ಅವಶ್ಯಕತೆ ಇಲ್ಲ. ಬರ ಘೋಷಣೆ ಮಾಡಿದ್ದು ಅದರ ಲಾಭ ಏನು ಸಿಗಬೇಕು ಇಲ್ಲೂ ಸಿಗುತ್ತೆ ಎಂದರು.

ಕೇಂದ್ರ ಬರ ಅಧ್ಯಯನ ತಂಡಕ್ಕೆ ಬರ ಪರಿಸ್ಥಿತಿ ಮನವರಿಕೆ ಮಾಡುವಲ್ಲಿ ಸರ್ಕಾರ ವಿಫಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ನಾವು ಮನವರಿಕೆ ಮಾಡೋದಲ್ಲ ಅವರಿಗೆ ಆಗಬೇಕು. ನಾವು ಹೇಳಿದ್ರೆ ವರದಿ ಕೊಡಲ್ಲ, ವಸ್ತು ಸ್ಥಿತಿ ಇದ್ರೆ ಮಾತ್ರ ವರದಿ ಕೊಡ್ತಾರೆ. ಇನ್ಫ್ಲೂಯೆನ್ಸ್ ಮಾಡೋ ಅವಶ್ಯಕತೆ ಇಲ್ಲ, ನಿಜವಾದ ವರದಿ ಅವರೇ ಕೊಡ್ತಾರೆ ನಾವು ಉಪಸಮಿತಿಯಲ್ಲಿ ಹೇಳಿದ್ದೇವೆ, ಸಿಎಂ ಸಭೆ ಮಾಡಿ ಹೇಳಿದ್ದಾರೆ ಎಂದರು.

 

ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬಂದವರಿಗೆ ಸ್ವಾಗತ: ಸತೀಶ ಜಾರಕಿಹೊಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ