ಯೋಧ ಗುರು ತಿಥಿ ವೆಚ್ಚ ಭರಿಸುವೆ: ತಮ್ಮಣ್ಣ

Published : Feb 23, 2019, 09:19 AM IST
ಯೋಧ ಗುರು ತಿಥಿ ವೆಚ್ಚ ಭರಿಸುವೆ: ತಮ್ಮಣ್ಣ

ಸಾರಾಂಶ

ಗುರು ನಮ್ಮ ಊರಿನ ಯೋಧ. ಆತ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾನೆ. ಆತನ ಋುಣ ತೀರಿಸುವುದು ಅಸಾಧ್ಯ. ಆತನ ಪುಣ್ಯತಿಥಿಯ ಸಂಪೂರ್ಣ ಖರ್ಚನ್ನು ನಿರ್ವಹಿಸುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ- ಡಿ.ಸಿ.ತಮ್ಮಣ್ಣ

ಮಂಡ್ಯ[ಫೆ.23]: ಹುತಾತ್ಮ ಯೋಧ ಗುರು 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮದ ಸಂಪೂರ್ಣ ಖರ್ಚು, ವೆಚ್ಚವನ್ನು ವಹಿಸಿಕೊಳ್ಳುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.

ಭಾರತೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುರು ನಮ್ಮ ಊರಿನ ಯೋಧ. ಆತ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾನೆ. ಆತನ ಋುಣ ತೀರಿಸುವುದು ಅಸಾಧ್ಯ. ಆತನ ಪುಣ್ಯತಿಥಿಯ ಸಂಪೂರ್ಣ ಖರ್ಚನ್ನು ನಿರ್ವಹಿಸುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರು ಕೂಡ ಎಲ್ಲಾ ಕಾರ್ಯದಲ್ಲೂ ಸಹಾಯ ಮಾಡುತ್ತಾರೆ ಎಂದರು.

ಪುಣ್ಯತಿಥಿಯ ದಿನ ಮಾಮೂಲಿಯಾಗಿ ಏನೇನು ಅಡುಗೆ ಮಾಡುತ್ತಾರೋ ಅದೆಲ್ಲವನ್ನೂ ಮಾಡಿಸಲಾಗುವುದು. ಮನೆಯವರ ಆಶಯದಂತೆ ಕಾರ್ಯ ನಡೆಯಲಿದೆ. 4ರಿಂದ 5 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಸದ್ಯದಲ್ಲೇ ಹುತಾತ್ಮ ಯೋಧ ಗುರು ಸ್ಮಾರಕವನ್ನೂ ಕೂಡ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!
ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!