
ಬೆಂಗಳೂರು(ಜೂ.16): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ದೆಹಲಿಯಿಂದ ನಗರಕ್ಕೆ ಆಗಮಿಸಿದ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದೆ. ಸೋಮವಾರ ವಿಚಾರಣೆಗೆ ಬರುವುದಾಗಿ ಮೊದಲೇ ತಿಳಿಸಿದ್ದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹೋಗುತ್ತೇನೆ ಎಂದರು.
ರಾಜಕೀಯವಾಗಿ ಮಣಿಸಲು ನಮ್ಮಪ್ಪನ ಮೇಲೆ ಪೋಕ್ಸೋ ಕೇಸ್ ಆರೋಪ ಹೊರಿಸಿದ್ದಾರೆ; ಬಿ.ವೈ. ರಾಘವೇಂದ್ರ
ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಲಾಗಿದೆ. ನಾನು ಯಾರ ಮೇಲೂ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನೆಂಬುದು ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡುತ್ತಿದ್ದಾರೋ, ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನ್ಯಾಯಾಂಗದ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ