ರಾಜಕೀಯಕ್ಕೆ ಬರ್ತಾರಂತೆ ರಿಷಭ್ ಶೆಟ್ಟಿ, ರಕ್ಷಿತ್ ಸಾಥ್ ಕೊಡ್ತಾರಾ?

Published : Apr 03, 2023, 09:48 PM ISTUpdated : Apr 03, 2023, 10:48 PM IST
ರಾಜಕೀಯಕ್ಕೆ ಬರ್ತಾರಂತೆ ರಿಷಭ್ ಶೆಟ್ಟಿ, ರಕ್ಷಿತ್ ಸಾಥ್ ಕೊಡ್ತಾರಾ?

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಕಾಂತಾರ ಚಿತ್ರದ ಸಕ್ಸಸ್ ಬಳಿಕ ರಿಷಭ್ ಶೆಟ್ಟಿ ರಾಜಕೀಯ ರಂಗಕ್ಕೆ ಪ್ರವೇಶ ಪಡೆಯುತ್ತಾರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ. ಹಾಗಾದರೆ ಯಾವ ಪಕ್ಷ ಸೇರ್ತಾರೆ? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಬೆಂಗಳೂರು (ಏ.3): ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಪಕ್ಷಾಂತರ ಪರ್ವ ಕೂಡ ಆರಂಭವಾಗಿದೆ.  ಇವೆಲ್ಲದರ ನಡುವೆ  ಸಾಮಾಜಿಕ ಜಾಲತಾಣದಲ್ಲಿ ಕಾಂತಾರ ಚಿತ್ರದ ಸಕ್ಸಸ್ ಬಳಿಕ ರಿಷಭ್ ಶೆಟ್ಟಿ ರಾಜಕೀಯ ರಂಗಕ್ಕೆ ಪ್ರವೇಶ ಪಡೆಯುತ್ತಾರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ. ವಿಶೇಷವೆಂದರೆ ಈ ಚರ್ಚೆಗೆ ನಟ ರಕ್ಷಿತ್ ಶೆಟ್ಟಿ ಕೂಡ ಜೊತೆಯಾಗಿದ್ದಾರೆ. ಹಾಗಾದರೆ ಯಾವ ಪಕ್ಷ ಸೇರ್ತಾರೆ? ಎಂಬ ಕುತೂಹಲ ಖಂಡಿತ.

ಮಹಿಳೆಯೊಬ್ಬರು ಟ್ವಿಟ್ಟರ್ ನಲ್ಲಿ  ರಿಷಭ್ ಶೆಟ್ಟಿ ರಾಜಕೀಯಕ್ಕೆ ಸೇರುತ್ತಾರಾ? ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ  ವಿಭಿನ್ನ ರೀತಿಯಲ್ಲಿ ಕಮೆಂಟ್ ಗಳು ಸಾಕಷ್ಟು ಬಂದಿದೆ. ಮಹಿಳೆ ಮಾಡಿದ ಈ ಟ್ವೀಟ್ ಗೆ ರಿಷಭ್ ಪ್ರತಿಕ್ರಿಯಿಸಿದ್ದಾರೆ. ಮಾತ್ರವಲ್ಲ ಅವರ ಆತ್ಮೀಯ ಗೆಳೆಯ ನಟ ರಕ್ಷಿತ್ ಶೆಟ್ಟಿ ಕೂಡ ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆಯ ಟ್ವೀಟ್ ಗೆ ಉತ್ತರಿಸಿದ ಶೆಟ್ರು , ಸುಮ್ನನೆ ಇರಿ ಮರ್ರೆ ಸುಳ್ಳು ಸುದ್ದಿ, #April1st ಹೀಗೆ ಹೇಳಿ... ಮೊದಲೇ ಕೆಲವರು ನನ್ನ ಒಂದು ಪಕ್ಷಕ್ಕೆ ಸೇರಿಸಿದ್ದಾರೆ. ನಾನು ರಾಜಕೀಯಕ್ಕೆ ಎಂದು ಹೋಗುವುದಿಲ್ಲ ಎಂದಿದ್ದಾರೆ.

ಮತ್ತೊಂದು ಕಮೆಂಟ್ ನಲ್ಲಿ ಬನ್ನಿ ಶೆಟ್ರೆ ನಮ್ಮ ಫುಲ್ ಸಪೂರ್ಟ್ ನಿಮಗೆ ಎಂದು ರಕ್ಷಿತ್ ಮತ್ತು ರಿಷಭ್ ಗೆ ಟ್ಯಾಗ್ ಮಾಡಲಾಗಿದೆ. ಇದಕ್ಕ ಉತ್ತರಿಸಿರುವ ರಿಷಭ್ ಶೆಟ್ಟಿ ಬೇಡ ದೇವ್ರು, ಬೇಡ ದೇವ್ರು, ನನ್ನ ಸಿನಿಮಾಗೆ ನಿಮ್ಮ ಸಪೋರ್ಟ್ ಇದ್ರೆ ಸಾಕು ಎಂದಿದ್ದಾರೆ.

Breaking: ಆಂತರಿಕ ಸಮಸ್ಯೆ, ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮುಂದೂಡಿಕೆ!

ನಟ ರಕ್ಷಿತ್ ಶೆಟ್ಟಿ ಇದಕ್ಕೆ ಉತ್ತರಿಸಿ  "ಎಂದೂ ಹೋಗುವುದಿಲ್ಲ? Ahem ahem" ಎಂದಿದ್ದಾರೆ. ರಕ್ಷಿತ್ ಅವರ ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ ರಿಷಭ್ , "ನಾವು ಕ್ಷೇತ್ರ ಬಿಟ್ಟು ಹೋಗಬಾರದು, ಜನ ನಮ್ಗೆ ಆಶೀರ್ವಾದ ಮಾಡಿದ್ದಾರೆ,ನಮಗೆ ಸಿನಿಮಾ ಕ್ಷೇತ್ರವೇ ಸಾಕು ಮಗಾ" ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಸಂಭಾಷಣೆಗೆ ಸಿಕ್ಕಾಪಟ್ಟೆ ಪ್ರತಿಕ್ರಿಯೆಗಳು ಬಂದಿದೆ.

ಬಿಜೆಪಿ ಪರ ಸ್ಪರ್ಧೆ, ಡಿಜಿ ಕಚೇರಿಗಳ ಮೆಟ್ಟಿಲಿಗೆ ನಮಸ್ಕರಿಸಿದ ಕಣ್ಣೀರಿಟ್ಟ ಸಿಪಿಐ

ಏಪ್ರಿಲ್ 1 ರಂದು ಮೂರ್ಖರ ದಿನವನ್ನಾಗಿ ಆಚರಿಸಲಾಗುತ್ತದೆ. ಆದಿನ ಟ್ವಿಟ್ಟರ್ ನಲ್ಲಿ ಮಹಿಳೆಯೊಬ್ಬರು "ರಿಷಬ್ ರಾಜಕೀಯಕ್ಕೆ ಎಂಟ್ರಿ ಇವತ್ತಿನ ಸುದ್ದಿ" ಎಂದು ಟ್ವೀಟ್ ಮಾಡಿದ್ದು, ಇಷ್ಟೇಲ್ಲ ಸಂಭಾಷಣೆಗೆ ಕಾರಣವಾಯ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂತ್ರಿಯಾದ 25 ದಿನಕ್ಕೆ ನಾಗೇಂದ್ರ ರಾಜೀನಾಮೆ, ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ
226 ಸೇತುವೆ, 57 ಸುರಂಗ, 108 ತಿರುವು, ಪ್ರಕೃತಿ ನಡುವೆ ಬೆಂಗಳೂರು ಮಂಗಳೂರು ವಂದೇ ಭಾರತ್ ಬ್ಯೂಟಿ