
ವಿಜಯಪುರ (ಸೆ.25): ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗೋವರೆಗೂ ನಾನು ಸಾಯುವುದಿಲ್ಲ ಎನ್ನುವ ಮೂಲಕ ಸಂಸದ ರಮೇಶ ಜಿಗಜಿಣಗಿ ಅವರು ‘ದಲಿತ ಸಿಎಂ’ ಕೂಗು ಮುನ್ನೇಲೆಗೆ ತಂದಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ ಅವರು, ‘ನಾನು ದಲಿತ ಸಿಎಂ ಆದ ಮೇಲೆಯೇ ಸಾಯ್ತಿನಿ. ಅಲ್ಲಿಯವರೆಗೂ ಸಾಯೋದಿಲ್ಲ’ ಎಂದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸರ್ಕಾರಿ ವಾಹನಗಳಿಗೆ ಪೆಟ್ರೋಲ್ ಹಾಕಲು ಹಣ ಇಲ್ಲದ ಕೆಟ್ಟ ಪರಿಸ್ಥಿತಿ ಬಂದಿದೆ. ಶಾಸಕರು ಸಂಚಾರ ಮಾಡಿ ರೈತರ ಸಮಸ್ಯೆ ಕೇಳಲು ಹೋಗಬೇಕಾದರೆ ಅವರ ಗಾಡಿಗೆ ಹಾಕಲು ಪೆಟ್ರೋಲ್ ಇಲ್ಲ. ಹೋಗಲು ಸರಿಯಾದ ರಸ್ತೆ ಇಲ್ಲ. ರೈತರಿಗೆ ಪರಿಹಾರ ನೀಡಲೂ ಸರ್ಕಾರದ ಬಳಿ ಹಣ ಇಲ್ಲ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಜೀವನದ ಜೊತೆ ಆಟ ಆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: sahyog portal: ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ಕೊಟ್ಟರೆ ಅರಾಜಕತೆ- ಹೈಕೋರ್ಟ್
ಈ ಜಾತಿ ಸಮೀಕ್ಷೆ ಎಂಬುವುದು ಹೇಯ ಕೃತ್ಯ. ರಾಜ್ಯ ಸರ್ಕಾರ ನಿಜವಾಗಿ ಜನರ ಮೇಲೆ ಕಾಳಜಿ ಇದ್ದರೆ, ಜಾತಿ ಸಮೀಕ್ಷೆ ಕೈ ಬಿಟ್ಟು, ರೈತರ ಸಮಸ್ಯೆಗಳ, ಜನರ ಆರ್ಥಿಕ ವ್ಯವಸ್ಥೆ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ