ಎತ್ತಂಗಡಿಯಾಗಿದ್ದ IAS ಅಧಿಕಾರಿ‌ ಮಣಿವಣ್ಣನ್‌ಗೆ ಕೊನೆಗೂ ಹುದ್ದೆ ಕೊಟ್ಟ ಸರ್ಕಾರ

Published : May 12, 2020, 06:36 PM IST
ಎತ್ತಂಗಡಿಯಾಗಿದ್ದ IAS ಅಧಿಕಾರಿ‌ ಮಣಿವಣ್ಣನ್‌ಗೆ ಕೊನೆಗೂ ಹುದ್ದೆ ಕೊಟ್ಟ ಸರ್ಕಾರ

ಸಾರಾಂಶ

ಕೊರೋನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ಅವರನ್ನು ಹುದ್ದೆ ನೀಡದೇ ದಿಢೀರ್ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಅವರಿಗೆ  ಸ್ಥಳ ನಿಯೋಜನೆ ಮಾಡಿದೆ.

ಬೆಂಗಳೂರು, (ಮೇ.12): ದಿಢೀರ್ ವರ್ಗಾವಣೆಗೊಂಡಿದ್ದ ಹಿರಿಯ ಐಎಎಸ್‌ ಅಧಿಕಾರಿ ಪಿ. ಮಣಿವಣ್ಣನ್ ಅವರಿಗೆ ರಾಜ್ಯ ಸರ್ಕಾರ ಕೊನೆಗೂ ಸ್ಥಾನ ತೋರಿಸಿದೆ.

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಇಂದು (ಮಂಗಳವಾರ) ಆದೇಶ ಮಾಡಿದೆ.

ರಾತ್ರಿ 8 ಗಂಟೆಗೆ ಮೋದಿ ಭಾಷಣ, ದಿಢೀರ್ ಸನ್ನಿ ಲಿಯೋನ್ ವಿದೇಶ ಪ್ರಯಾಣ; ಮೇ.12ರ ಟಾಪ್ 10 ಸುದ್ದಿ! 

ನಿನ್ನೆಯಷ್ಟೆ (ಸೋಮವಾರ) ಕಾರ್ಮಿಕ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಈ ಎರಡೂ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಹುದ್ದೆಗಳಿಂದ ಪಿ. ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಿತ್ತು.ವಿಪರ್ಯಾಸ ಅಂದ್ರೆ ಹಿರಿಯ ಅಧಿಕಾರಿಗೆ ಯಾವುದೇ ಹುದ್ದೆ ನೀಡದೆ ಟ್ರಾನ್ಸ್‌ಫರ್ ಮಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಕಾರ್ಮಿಕ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಮಣಿವಣ್ಣನ್ ವರ್ಗಾವಣೆಯನ್ನು ವಿರೋಧಿಸಿದ್ದು, ಕೈಗಾರಿಕಾ ಕಂಪನಿಗಳ ಒತ್ತಡಕ್ಕೆ ಮಣಿದು ಅವರ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದವು.

ಅಲ್ಲದೇ ಮಣಿವಣ್ಣನ್ ಅವರನ್ನು ಮತ್ತೆ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮರು ವರ್ಗಾವಣೆ ಮಾಡುವಂತೆ ಸಾಮಾಜಿಕ ಜಾಲತಣಾದಲ್ಲಿ ಅಭಿಯಾನ ನಡೆಯುತ್ತಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯಿಂದ ವರ್ಗಾವಣೆ ಮಾಡಿರುವುದು ಸರಿಯಲ್ಲ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ