ರಂದೀಪ್‌ ವರ್ಗಕ್ಕೆ ತೀವ್ರ ವಿರೋಧ: ಆದೇಶಕ್ಕೆ ತಡೆ!

Published : Dec 06, 2018, 10:50 AM IST
ರಂದೀಪ್‌ ವರ್ಗಕ್ಕೆ ತೀವ್ರ ವಿರೋಧ: ಆದೇಶಕ್ಕೆ ತಡೆ!

ಸಾರಾಂಶ

ಬೆಂಗಳೂರಿನಲ್ಲಿನ ತ್ಯಾಜ್ಯ ಸಮಸ್ಯೆ ನಿವಾರಣೆಗೆ ಸಾಕಷ್ಟು ಕ್ರಮ ಕೈಗೊಂಡಿದ್ದ ರಂದೀಪ್‌ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿತ್ತು. ಆದರೀಗ ಇವರ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ತಡೆ ಹಿಡಿಯಲಾಗಿದೆ.

ಬೆಂಗಳೂರು[ಡಿ.06]: ಬಿಬಿಎಂಪಿ ಅಪರ ಆಯುಕ್ತ ಹುದ್ದೆಯಿಂದ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡಿದ್ದ ರಂದೀಪ್‌ ಅವರ ವರ್ಗಾವಣೆಯನ್ನು ತಡೆ ಹಿಡಿದು ಸರ್ಕಾರ ಆದೇಶಿಸಿದೆ.

ಬೆಂಗಳೂರಿನಲ್ಲಿನ ತ್ಯಾಜ್ಯ ಸಮಸ್ಯೆ ನಿವಾರಣೆಗೆ ಸಾಕಷ್ಟುಕ್ರಮ ಕೈಗೊಂಡಿದ್ದ ರಂದೀಪ್‌ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಸಾರ್ವಜನಿಕ ವಲಯದಲ್ಲಿ ಭಾರೀ ಅಸಮಾಧಾನ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಕ್ರಮ ಖಂಡಿಸಿದ್ದರು. ಅಲ್ಲದೆ, ಆನ್‌ಲೈನ್‌ ಸಹಿ ಸಂಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರ ಬಿಬಿಎಂಪಿ ಸಿಬ್ಬಂದಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ರಂದೀಪ್‌ ಅವರನ್ನು ವರ್ಗಾವಣೆ ಮಾಡಿದರೆ ಕಸದ ಸಮಸ್ಯೆ ಮತ್ತಷ್ಟುಉಲ್ಭಣವಾಗಲಿದೆ. ತ್ಯಾಜ್ಯ ಸಮಸ್ಯೆ ನಿವಾರಣೆಗೆ ಸಾಕಷ್ಟುಕ್ರಮ ಕೈಗೊಳ್ಳುತ್ತಿರುವ ಅವರನ್ನು ವರ್ಗಾವಣೆ ಮಾಡುವುದು ಸರಿಯಲ್ಲ. ಹೀಗಾಗಿ ಅವರ ವರ್ಗಾವಣೆ ರದ್ದು ಮಾಡಬೇಕು ಎಂದು ಮೇಯರ್‌ ಮತ್ತು ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರ, ಮುಂದಿನ ಆದೇಶದವರೆಗೆ ಬಿಬಿಎಂಪಿಯ ಅಪರ ಆಯುಕ್ತ ಹುದ್ದೆಯಲ್ಲಿಯೇ ಮುಂದುವರಿಯುವಂತೆ ರಂದೀಪ್‌ ಅವರಿಗೆ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ