
ಬೆಂಗಳೂರು (ಸೆ.12): ವಿವಿಧ ವಸತಿ ಯೋಜನೆಯಡಿ ನಾಲ್ಕು ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ನಾಲ್ಕು ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತರೆ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಯಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು.
ರಾಜ್ಯದ ಯೋಜನೆಗಳಿಗೆ ಕೇಂದ್ರದ ಬಂಪರ್ ನೆರವು
ಅದರಂತೆ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದ ವಸತಿ ರಹಿತರಿಗಾಗಿ ವಸತಿ ಯೋಜನೆಯಡಿ ನಾಲ್ಕು ಲಕ್ಷ ಹೊಸ ಮನೆಗಳಿಗೆ ಎದುರಾಗಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ