ರಾಜ್ಯದಲ್ಲಿ ಬಿಜೆಪಿ 25 ಎಂಪಿ ಸೀಟು ಗೆದ್ದರೆ ಸರ್ಕಾರ ಢಮಾರ್‌: ಯತ್ನಾಳ್‌

Published : Sep 10, 2023, 09:57 AM IST
ರಾಜ್ಯದಲ್ಲಿ ಬಿಜೆಪಿ 25 ಎಂಪಿ ಸೀಟು ಗೆದ್ದರೆ ಸರ್ಕಾರ ಢಮಾರ್‌: ಯತ್ನಾಳ್‌

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟುಗಳನ್ನು ಗೆದ್ದರೆ ರಾಜ್ಯ ಸರ್ಕಾರ ಢಮಾರ್‌ ಎನ್ನುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳ (ಸೆ.10) ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟುಗಳನ್ನು ಗೆದ್ದರೆ ರಾಜ್ಯ ಸರ್ಕಾರ ಢಮಾರ್‌ ಎನ್ನುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶನಿ​ವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಶಾಸಕರಿಗೆ ಅನುದಾನವೇ ಸಿಗು​ತ್ತಿಲ್ಲ. ಇದರಿಂದ ಅವರು ಹಳ್ಳಿಗಳಿಗೆ ಹೋಗಲು ಆಗುತ್ತಿಲ್ಲ. ಇದರಿಂದ ಕಾಂಗ್ರೆಸ್‌ ಶಾಸಕರು ಸಹ ಅಸಮಾಧಾನಗೊಂಡಿದ್ದಾರೆ ಎಂದರು. ಮೂರು ತಿಂಗ​ಳಲ್ಲೇ ಕಾಂಗ್ರೆಸ್ಸಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಅಲ್ಲಿ ಹಿರಿಯ ಶಾಸಕರಿಗೆ ಗೌರವ ಸಿಗುತ್ತಿಲ್ಲ. ಸಚಿವರಾಗದ ಅತೃಪ್ತ ಆತ್ಮಗಳಿವೆ. ಈ ಅತೃಪ್ತರ ಆತ್ಮಗಳು ಏನು ಮಾಡ್ತಾವೋ ಕಾದು ನೋಡೋಣ ಎಂದರು. ಈಗಿನ ಸ್ಥಿತಿಯಲ್ಲಿ ಕಾಂಗ್ರೆಸ್ಸಿನ 50ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ಸಿಗರಿಗೆ ತಮ್ಮ 135 ಮಂದಿ ಶಾಸಕರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಬಿಜೆಪಿ ಶಾಸಕರನ್ನು ಮಾತನಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗೆ ಯಾರಾದರೂ ಹೋದರೆ ಅವರಿಗೆ ಭವಿಷ್ಯ ಇಲ್ಲ. ಅವರನ್ನು ಬಾಗಿಲು ಕಾಯೋಕೆ ಹಚ್ಚುತ್ತಾರೆ. ಬಿಜೆಪಿಯ ಯಾವ ಮುಖಂಡರು ಕಾಂಗ್ರೆಸ್ಸಿಗೆ ಹೋಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಸದೃಢವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25ಕ್ಕಿಂತ ಅಧಿಕ ಸ್ಥಾನ ಗೆಲ್ಲುತ್ತೇವೆ. ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುತ್ತದೆ ಎಂದುಕೊಂಡಿತ್ತು. ಆದರೆ ಆಗಿಲ್ಲ. ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುವುದು. 65 ಜನರಲ್ಲಿ ಯಾರನ್ನಾದರೂ ಮಾಡಲಿ. ನಮಗೆ ಖುಷಿ ಇದೆ ಎಂದರು.

ಜಿ20 ಶೃಂಗಸಭೆಗೆ ಬುದ್ಧಿ ಇರೋರನ್ನ ಕರೆಸ್ತಾರೆ, ರಾಹುಲ್ ಗಾಂಧೀನ ಕರೆಸಿ ಏನು ಮಾಡಬೇಕು: ಯತ್ನಾಳ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!