ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ, ಬಿಟ್ಟರೆ ಜೈಲ್ ಭರೋ ಚಳುವಳಿ ಮಾಡ್ತೇವೆ; ವಾಟಾಳ್ ನಾಗರಾಜ್

Published : Jul 13, 2024, 07:35 PM ISTUpdated : Jul 13, 2024, 10:49 PM IST
ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ, ಬಿಟ್ಟರೆ ಜೈಲ್ ಭರೋ ಚಳುವಳಿ ಮಾಡ್ತೇವೆ; ವಾಟಾಳ್ ನಾಗರಾಜ್

ಸಾರಾಂಶ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹೊರಡಿಸುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಬಿಡಬೇಡಿ, ಬಿಟ್ಟರೆ ಜೈಲ್ ಭರೋ ಚಳುವಳಿ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಜು.13): ಕಾವೇರಿ ನಿರ್ವಹಣಾ ಸಮಿತಿ  ಪ್ರತಿದಿನ 1 ಟಿಎಂಸಿ ನೀರಿನಂತೆ ಜು.31ರವರೆಗೂ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ನೀಡಿದ್ದಾರೆ. ಯಾವಾಗಲೂ ತಮಿಳುನಾಡಿಗೆ ನೀರು ಬಿಡಿ ಎನ್ನುವ ನಿರ್ಹಹಣಾ ಸಮಿತಿ ನಮಗೆ ಬೇಡ. ತಮಿಳುನಾಡಿಗೆ ಕಾವೇರಿ ನೀರು ಬಿಡಬೇಡಿ, ಬಿಟ್ಟರೆ ಎಲ್ಲ ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಜೈಲ್ ಭರೋ ಚಳುವಳಿ ಮಾಡ್ತೇವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಸಮಿತಿ  ಪ್ರತಿದಿನ 1 ಟಿಎಂಸಿ, ಜು.31ರವರೆಗೂ ಬಿಡುಗಡೆ ಮಾಡಬೇಕೆಂದು ಆದೇಶ ನೀಡಿದ್ದಾರೆ. ಇದು ನಿಜವಾಗ್ಲೂ ಕರ್ನಾಟಕಕ್ಕೆ, ನಮ್ಮ ರೈತರಿಗೆ ಅನ್ಯಾಯವಾಗಿದೆ. ನಮ್ಮ ಕೆರೆಗಳಲ್ಲಿ ನೀರಿಲ್ಲ, ನಮ್ಮ ಬೆಳೆಗಳು ನಾಶವಾಗ್ತಿವೆ. ಎಲ್ಲಾ ಜಲಾಶಯಗಳು ಸದ್ಯ 60 ಟಿಎಂಸಿ ನೀರು ಇರಬಹುದು. ಈಗಿನ ಪರಿಸ್ಥಿತಿಯಲ್ಲಿ 90-95 ಟಿಎಂಸಿ ನೀರು ಇರಬೇಕಿತ್ತು. ಆದರೆ, ನೀರು ತುಂಬಾ ಕಡಿಮೆ ಇದ್ದರೂ ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾಶಯದಿಂದ ನೀರು ಬಿಡುವಂತೆ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಲಿಯಂತೆ ಬೇಟೆಗಾಗಿ ಕಾದು ಕುಳಿತ ಮದಗಜ; ಕಾಫಿ ತೋಟಕ್ಕೆ ಹೋದವನ ಮೇಲೆ ಒಂಟಿ ಸಲಗ ಡೆಡ್ಲಿ ಅಟ್ಯಾಕ್

ಕರ್ನಾಟಕದಲ್ಲಿ ಹಂತದಲ್ಲಿ ಪ್ರಾಧಿಕಾರ ಅವರು ಕರ್ನಾಟಕ ಪರ ಇಲ್ಲ. ಇಲ್ಲಿವರೆಗೂ ತಮಿಳುನಾಡಿಗೆ ನೀರು ಬಿಡಿ ಅಂತ ಹೇಳ್ತಿದ್ದಾರೆ. ಇಂತಹ ನಿರ್ವಹಣಾ ಸಮಿತಿ ನಮಗೆ ಬೇಡ. ಜಲಾಶಯ ನಮ್ದು, ಆದ್ರೆ ನಿರ್ವಹಣೆ ಮಾಡ್ತಿರುವವರು ದೆಹಲಿಯವರು. ಇಡೀ ರಾಜ್ಯದ ಜನರು ವಿರೋಧ ಮಾಡಬೇಕು. ರಾಜ್ಯದ ಎಲ್ಲ ಸಂಸದರು ರಾಜ್ಯದ ಪರವಾಗಿ ಏನು ಮಾಡ್ತಾರೆ? ಎಲ್ಲಾ ಸಂಸದರು ಕೂಡಲೇ ಪ್ರಧಾನಿ ಮಂತ್ರಿಗಳ ಬಳಿ ಹೋಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾದ ಬಗ್ಗೆ ಮಾತನಾಡಬೇಕು. ಇದು ಗಂಭೀರವಾದ ಪರಿಸ್ಥಿತಿ ಎಂದು ಕಿಡಿಕಾರಿದರು.

ಪ್ರೀತಿಸಿ ಮದುವೆಯಾದ ಕುಟುಂಬದಲ್ಲಿ ಗಂಡ ಸಾವು; ಮಗನನ್ನು ನೇಣು ಬಿಗಿದು, ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!

ತಮಿಳುನಾಡಿನವರು ಭಾರತ ದೇಶದಲ್ಲಿ ಇದ್ದೀವಿ ಅಂತ ಅನ್ಕೊಂಡಿಲ್ಲ. ಕರ್ನಾಟಕ ಮೇಲೆ ತಮಿಳುನಾಡಿನ ಎಲ್ಲ ಮುಖ್ಯಮಂತ್ರಿಗಳು ವಿರೋಧ ಮಾಡಿಕೊಂಡೇ ಬರುತ್ತಿದ್ದಾರೆ. ಇವತ್ತು ಮೇಕೆದಾಟು ಬಗ್ಗೆ ಸರ್ಕಾರ ನಿಲುವು ಏನು? ಮೇಕೆದಾಟು ಪಾದಯಾತ್ರೆ ಮಾಡಿದ್ರಿ ಅಲ್ವಾ? ನಿಮ್ಮ ಮಾತಿನಂತೆ ನಡೆದುಕೊಳ್ಳಬೇಕು. ಮೇಕೆದಾಟು ಆಗಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಸಜ್ಜಾಗ್ತಿವೆ. ಎಲ್ಲಾ ಕನ್ನಡಪರ ಸಂಘಟನೆಗಳ ಜೊತೆ ಸಭೆ ಮಾಡ್ತಿವಿ. ಜೈಲು ಭರೋ ಚಳವಳಿ ಮಾಡ್ತಿವಿ. ತಮಿಳುನಾಡಿನ ವಿರುದ್ಧ ಮತ್ತಷ್ಟು ದ್ವೇಷ ಸೃಷ್ಟಿ ಆಗಬಹುದು ಎಂದು ವಾಟಾಳ್ ನಾಗರಾಜ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!