ಕೈ ಗೇಟ್ ತೆಗೆದ್ರೆ ಬಿಜೆಪೀಲಿ ಒಬ್ಬ ಶಾಸಕನೂ ಇರೊಲ್ಲ: ಸಚಿವ ಶಿವರಾಜ ತಂಗಡಗಿ

Published : Aug 29, 2023, 09:18 PM IST
ಕೈ ಗೇಟ್ ತೆಗೆದ್ರೆ ಬಿಜೆಪೀಲಿ ಒಬ್ಬ ಶಾಸಕನೂ ಇರೊಲ್ಲ: ಸಚಿವ ಶಿವರಾಜ ತಂಗಡಗಿ

ಸಾರಾಂಶ

ಕಾಂಗ್ರೆಸ್‌ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ನಾವೇಕೆ ಆಪರೇಷನ್‌ ಮಾಡೋಣ? ಪಕ್ಷದ ಸಿದ್ಧಾಂತ ಮೆಚ್ಚಿ ಅವರಾಗೇ ಬರುವವರಿದ್ದರೆ ಅವರನ್ನು ಸ್ವಾಗತಿಸುತ್ತೇವೆ. ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.   

ಕಲಬುರಗಿ: ಕಾಂಗ್ರೆಸ್‌ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ನಾವೇಕೆ ಆಪರೇಷನ್‌ ಮಾಡೋಣ? ಪಕ್ಷದ ಸಿದ್ಧಾಂತ ಮೆಚ್ಚಿ ಅವರಾಗೇ ಬರುವವರಿದ್ದರೆ ಅವರನ್ನು ಸ್ವಾಗತಿಸುತ್ತೇವೆ. ಬಿಜೆಪಿ ಆಪರೇಷನ್‌ ಕಮಲದ ಹೆಸರಲ್ಲಿ 16 ಶಾಸಕರಿಂದ ಉಪಯೋಗ ಪಡೆದುಕೊಂಡು ನಡುನೀರಿನಲ್ಲಿ ಬಿಟ್ಟಿದ್ದಾರೆ. ನಾವೀಗ ಪಕ್ಷದ ಗೇಟ್‌ ತೆರೆದರೆ ಬಿಜೆಪಿಯಲ್ಲಿ ಯಾರೂ ಇರೊಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಪರೇಷನ್‌ ಕಮಲ ಮಾಡಿ ಅನೈತಿಕ ಸರ್ಕಾರ ರಚನೆ ಮಾಡಿದ್ದು ಬಿಜೆಪಿ ವಿಶ್ವಾಸಘಾತುಕ ಪಕ್ಷ ಎಂದು ಟೀಕಿಸಿದರಲ್ಲದೆ, ಕಾಂಗ್ರೆಸ್‌ ಸರ್ಕಾರ ತನ್ನ ಆಡಳಿತದ ನೂರು ದಿನಗಳಲ್ಲೆ ಪ್ರಣಾಳಿಕೆಯಲ್ಲಿ ಹೇಳಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಿದೆ. ಆದರೆ, ಸರ್ಕಾರ ರಚನೆಯಾಗಿ 100 ದಿನ ಕಳೆದರೂ ಇಲ್ಲಿವರೆಗೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ ಎಂದು ವ್ಯಂಗ್ಯವಾಡಿದರು.

ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಡುಪಿ: 2 ಗಂಟೆ ಕಾದರೂ ಬರಲಿಲ್ಲ 108 ಆಂಬುಲೆನ್ಸ್‌, ಗೂಡ್ಸ್ ಟೆಂಪೋದಲ್ಲಿ ಸಾಗಿಸಿ ವೃದ್ಧನ ರಕ್ಷಣೆ!
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!