ಸಮಾಜದ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಷಡ್ಯಂತ್ರ; ಛಲವಾದಿ ಮಹಾಸಭಾ ಎಚ್ಚರಿಕೆ!

Published : Jan 09, 2025, 07:51 AM ISTUpdated : Jan 09, 2025, 07:53 AM IST
ಸಮಾಜದ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಷಡ್ಯಂತ್ರ; ಛಲವಾದಿ ಮಹಾಸಭಾ ಎಚ್ಚರಿಕೆ!

ಸಾರಾಂಶ

ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಏಳಿಗೆಯನ್ನು ಸಹಿಸದ ಕೆಲವು ಶಕ್ತಿಗಳು ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡುತ್ತಿವೆ ಎಂದು ಜಿಲ್ಲಾ ಛಲವಾದಿ ಮಹಾಸಭಾ ಖಂಡಿಸಿದೆ. ಪ್ರಿಯಾಂಕ್ ಖರ್ಗೆ ವಿರುದ್ಧದ ಟೀಕೆಗಳು ಮುಂದುವರಿದರೆ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಎನ್.ರುದ್ರಮುನಿ ಎಚ್ಚರಿಸಿದ್ದಾರೆ.

ದಾವಣಗೆರೆ (ಜ.10): ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೆ, ಕೆಲವೊಂದು ಶಕ್ತಿಗಳು ಇಲ್ಲಸಲ್ಲದ ಆರೋಪ ಎಸಗುತ್ತ, ತೇಜೋವಧೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಘಟಕ ಹೇಳಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೆ, ಕೆಲವೊಂದು ಶಕ್ತಿಗಳು ಇಲ್ಲಸಲ್ಲದ ಆರೋಪ ಎಸಗುತ್ತ, ತೇಜೋವಧೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಘಟಕ ದಾವಣಗೆರೆಯಲ್ಲಿ ಹೇಳಿದೆ.

ಇದನ್ನೂ ಓದಿ: ವಕ್ಫ್ ಹಠಾವೋ: ತಾಲಿಬಾನ್ ಮಾದರಿ ಆಡಳಿತ ನಡೆಸ್ತಿದ್ಯಾ ಸಿದ್ದರಾಮಯ್ಯ ಸರ್ಕಾರ? ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಪ್ರತಾಪ್ ಸಿಂಹ!

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎನ್.ರುದ್ರಮುನಿ, ಸಚಿವ ಪ್ರಿಯಾಂಕ್‌ ಖರ್ಗೆಯವರನ್ನೇ ಗುರಿಯಾಗಿಸಿಕೊಂಡು ರಾಜಕೀಯ ಎದುರಾಳಿಗಳು, ವಿಪಕ್ಷಗಳ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.
ಪ್ರಿಯಾಂಕ್‌ ಖರ್ಗೆ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಹಲವಾರು ರಾಜಕೀಯ ಮುಖಂಡರು ಪ್ರಿಯಾಂಕ್‌ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೇ, ಅನವಶ್ಯಕವಾಗಿ ಆಧಾರರಹಿತ ಹಾಗೂ ಅವಹೇಳನಕಾರಿಯಾಗಿ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಛಲವಾದಿ ಸಮಾಜದ ಯುವ ನಾಯಕ ಪ್ರಿಯಾಂಕ್‌ ಖರ್ಗೆ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಪ್ರಿಯಾಂಕ್‌ ಖರ್ಗೆ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಕೆಲವು ರಾಜಕೀಯ ಮುಖಂಡರು ನೀಡುತ್ತಿರುವುದು ನಮ್ಮ ಸಮುದಾಯಕ್ಕೆ ತೀವ್ರ ನೋವನ್ನುಂಟು ಮಾಡುತ್ತಿದೆ. ವಿಪಕ್ಷದವರ ಇಂತಹ ಹೇಳಿಕೆ, ಆರೋಪಗಳನ್ನು ಛಲವಾದಿ ಸಮಾಜ ವಿರೋಧಿಸುತ್ತದೆ ಎಂದು ತಿಳಿಸಿದರು.

ಇದೇ ರೀತಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಆರೋಪ ಮಾಡುವುದು, ಟೀಕಿಸುವುದು, ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ಅಂತಹವರ ವಿರುದ್ಧ ಛಲವಾದಿ ಸಮಾಜವು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವ ಮೂಲಕ ತಕ್ಕ ಪಾಠ ಕಲಿಸಲಿದೆ. ಇನ್ನಾದರೂ ಪ್ರಿಯಾಂಕ್‌ ಖರ್ಗೆ ಬಗ್ಗೆ ಮಾತನಾಡುವ ಮುನ್ನ ವಿಪಕ್ಷಗಳ ನಾಯಕರಾದವರು ಆಲೋಚಿಸಿ ಮಾತನಾಡಲಿ ಎಂದು ಎನ್.ರುದ್ರಮುನಿ ಕಿವಿಮಾತು ಹೇಳಿದರು.

ಇದನ್ನೂ ಓದಿಸಿಎಂ ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಸಮಾಜದ ಮುಖಂಡರಾದ ನಿವೃತ್ತ ಪೌರಾಯುಕ್ತ ಎಸ್.ಶೇಖರಪ್ಪ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಗನ್ನಾಥ, ಕೆಪಿಸಿಸಿ ಸಂಚಾಲಕ ಎಚ್.ಚಂದ್ರಪ್ಪ, ಯುವ ಮುಖಂಡ ಎಚ್.ಗಿರೀಶ, ಅರುಣಕುಮಾರ, ರೇವಣಸಿದ್ದಪ್ಪ, ಕೆ.ಶಿವಕುಮಾರ, ಅವಿನಾಶ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ