ಐಐಎಸ್‌ಸಿಯಲ್ಲಿ 'ಓಪನ್ ಡೇ' ಕಾರ್ಯಕ್ರಮ; ಇಂದು ಸಾರ್ವಜನಿಕರಿಗೆ ಮುಕ್ತ ಪ್ರವೇಶ!

Published : Feb 24, 2024, 05:45 AM IST
ಐಐಎಸ್‌ಸಿಯಲ್ಲಿ 'ಓಪನ್ ಡೇ' ಕಾರ್ಯಕ್ರಮ; ಇಂದು ಸಾರ್ವಜನಿಕರಿಗೆ ಮುಕ್ತ ಪ್ರವೇಶ!

ಸಾರಾಂಶ

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಫೆ. 24ರಂದು ಆಯೋಜಿಸಿರುವ ‘ಓಪನ್‌ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.

ಬೆಂಗಳೂರು (ಫೆ.24): ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಫೆ. 24ರಂದು ಆಯೋಜಿಸಿರುವ ‘ಓಪನ್‌ ಡೇ’ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಹಿನ್ನೆಲೆ ನಗರ ಸಂಚಾರ ಪೊಲೀಸರು ಐಐಎಸ್ಸಿ ಸುತ್ತಮುತ್ತಲ ರಸ್ತೆಗಳ ಸಂಚಾರ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಈ ಓಪನ್‌ ಡೇ ಕಾರ್ಯಕ್ರಮ ಜರುಗಲಿದೆ. 

ಕಾರ್ಯಕ್ರಮದ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸುಮಾರು 100ರಿಂದ 150 ಬಸ್‌ಗಳು, 250-350 ಕಾರುಗಳು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸುಮಾರು 60-80 ಸಾವಿರ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ, ವಾಹನ ನಿಲುಗಡೆ ಸೇರಿದಂತೆ ಕೆಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಶ್ವಾಸಕೋಶದ ಕ್ಯಾನ್ಸರ್ ಆರೈಕೆಯಲ್ಲಿ ಮಹತ್ವದ ಸಾಧನೆ ಮಾಡಿದ IISc

ಯಾವ ವಾಹನ ಎಲ್ಲಿ ನಿಲುಗಡೆ?

ಶಾಲಾ ಬಸ್/ನಾಲ್ಕು ಚಕ್ರ ವಾಹನಗಳು:

ಮಹಾರಾಣಿ ಲಕ್ಷ್ಮೀ ಅಮ್ಮಣ್ಣ ಕಾಲೇಜು ಬಳಿ ಮೈದಾನದ ಎದುರು ನಿಲುಗಡೆ ಮಾಡಬೇಕು. ಬಳಿಕ ಕಾಲು ನಡಿಗೆಯಲ್ಲಿ ಸರ್ಕಲ್‌ ಮಾರಮ್ಮ ಜಂಕ್ಷನ್‌ಗೆ ಬಂದು ಸಬ್‌ ವೇ ಸೊಸೈಟಿ ಫಾರ್‌ ಇನೋವೇಶನ್‌ ಆ್ಯಂಡ್‌ ಡೆವಲಪ್‌ಮೆಂಟ್‌(ಎಸ್‌ಐಡಿ) ಮುಖಾಂತರ ಐಐಎಸ್ಸಿ ಕ್ಯಾಂಪಸ್‌ ತಲುಪಬೇಕು.

ದ್ವಿಚಕ್ರ ವಾಹನಗಳು:ಐಐಎಸ್ಸಿ ಜಮಖಾನಾ ಮೈದಾನದ ಬದಿಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ಬಳಿಕ ಪ್ರೊ.ಸಿ.ಎನ್‌.ರಾವ್‌ ವೃತ್ತದಲ್ಲಿರುವ ಐಐಎಸ್ಸಿ ಮುಖ್ಯಗೇಟ್‌ ಮುಖಾಂತರ ಐಐಎಸ್ಸಿ ಕ್ಯಾಂಪಸ್‌ ತಲುಪಬೇಕು.

ಬದಲಿ ಮಾರ್ಗ- ಕಾರ್ಯಕ್ರಮ ಹೊರತುಪಡಿಸಿ ಇತರೆ ಸ್ಥಳಗಳಿಗೆ ತೆರಳುವ ರಸ್ತೆ ಬಳಕೆದಾರರು ಬದಲಿ ಮಾರ್ಗ ಬಳಸಿ
*ಸರ್.ಸಿ.ವಿ.ರಾಮನ್ ರಸ್ತೆ: ಮೇಕ್ರಿ ಸರ್ಕಲ್‌ನಿಂದ ಬಿಎಚ್ಇಎಲ್ ಸರ್ಕಲ್ ವರೆಗೆ

ನ್ಯೂಬಿಇಎಲ್ ರಸ್ತೆ: ಸದಾಶಿವನಗರ ಪಿ.ಎಸ್ ಜಂಕ್ಷನ್‌ನಿಂದ ರೈಲ್ವೇ ಬ್ರಿಡ್ಜ್ ವರೆಗೆ
*ಟಿ.ಚೌಡಯ್ಯ ರಸ್ತೆ: ಸಿ.ಎನ್.ಆರ್.ರಾವ್ ಅಂಡರ್‌ಪಾಸ್‌ನಿಂದ ಕಾವೇರಿ ಜಂಕ್ಷನ್ ವರೆಗೆ

ಮಾರ್ಗೋಸಾ ರಸ್ತೆ: ಮಾರಮ್ಮ ಸರ್ಕಲ್‌ನಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
- ಸರ್.ಸಿ.ವಿ.ರಾಮನ್ ರಸ್ತೆ: ಮೇಕ್ರಿ ಸರ್ಕಲ್‌ನಿಂದ ಬಿಎಚ್ಇಎಲ್ ಸರ್ಕಲ್ ವರೆಗೆ ರಸ್ತೆಯ ಎರಡೂ ಬದಿ 

- ನ್ಯೂಬಿಇಎಲ್ ರಸ್ತೆ: ಸದಾಶಿವನಗರ ಪಿ.ಎಸ್ ಜಂಕ್ಷನ್‌ನಿಂದ ರೈಲ್ವೇ ಬ್ರಿಡ್ಜ್ ವರೆಗೆ ರಸ್ತೆಯ ಎರಡೂ ಬದಿ
- ಟಿ.ಚೌಡಯ್ಯ ರಸ್ತೆ: ಸಿ.ಎನ್.ಆರ್.ರಾವ್ ಅಂಡರ್‌ಪಾಸ್‌ನಿಂದ ಕಾವೇರಿ ಜಂಕ್ಷನ್ ವರೆಗೆ ರಸ್ತೆ ಎರಡೂ ಬದಿ

- ಮಾರ್ಗೋಸಾ ರಸ್ತೆ: ಮಾರಮ್ಮ ಸರ್ಕಲ್‌ನಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 

ವಿಶ್ವದ ಟಾಪ್‌ ವಿವಿ ಪಟ್ಟಿ ಬಿಡುಗಡೆ, 91 ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಅಗ್ರಸ್ಥಾನ ಪಡೆದ ಐಐಎಸ್‌ಸಿ ಬೆಂಗಳೂರು

ಸರಕು ಸಾಗಣೆ ವಾಹನ ಸಂಚಾರ ನಿಷೇಧ

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಭಾರೀ ಸರಕು ಸಾಗಾಣೆ ವಾಹನಗಳ ನಗರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಎಲ್ಲೆಲ್ಲಿ ಮಾರ್ಗ ಬದಲಾವಣೆ?

ಯಶವಂತಪುರ ಸರ್ಕಲ್: ಸುಬ್ರಮಣ್ಯನಗರ, ರಾಜಕುಮಾರ್ ರಸ್ತೆ ಕಡೆಗೆಮೇಕ್ರಿಸರ್ಕಲ್: ಸದಾಶಿವನಗರ ಪಿ.ಎಸ್. ಜಂಕ್ಷನ್ ಕಡೆಗೆ, ಹೆಬ್ಬಾಳದ ಕಡೆಗೆ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ