ಬೆಟ್ಟಿಂಗ್ ಅಕ್ರಮ: ‘ಕೈ’ ಶಾಸಕಪಪ್ಪಿ ಇ.ಡಿ ಕಸ್ಟಡಿ 6 ದಿನ ವಿಸ್ತರಣೆ

Kannadaprabha News, Ravi Janekal |   | Kannada Prabha
Published : Aug 29, 2025, 07:12 AM IST
veerendra pappi

ಸಾರಾಂಶ

ಆನ್‌ಲೈನ್ ಮತ್ತು ಆಫ್‌ಲೈನ್ ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ಪಪ್ಪಿ ಅವರ ಇಡಿ ಕಸ್ಟಡಿ ಅವಧಿಯನ್ನು 6 ದಿನಗಳ ಕಾಲ ವಿಸ್ತರಿಸಲಾಗಿದೆ. 

 ಬೆಂಗಳೂರು (ಆ.29): ಆನ್‌ಲೈನ್‌ ಮತ್ತು ಆಫ್‌ಲೈನ್‌ ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧಿತ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅಲಿಯಾಸ್‌ ಪಪ್ಪಿ ಅವರ ಜಾರಿ ನಿರ್ದೇಶನಾಲಯದ (ಇ.ಡಿ.) ಕಸ್ಟಡಿ ಅವಧಿಯನ್ನು ಆರು ದಿನಗಳ ಕಾಲ ವಿಸ್ತರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ವೀರೇಂದ್ರ ಅವರ ಐದು ದಿನಗಳ ಕಸ್ಟಡಿ ಗುರುವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್‌ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಲಾಯಿತು. ಇ.ಡಿ.ಯನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಐ.ಎಸ್‌. ಪ್ರಮೋದ್‌ ಚಂದ್ರ ಅವರು ‘ವಡೋದರಾ, ಹೈದ್ರಾಬಾದ್‌ ಮತ್ತು ಇತರೆ ಡೆ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಬೇರೆ ಆರೋಪಿಗಳು ಪಪ್ಪಿ ಅವರ ಹೆಸರು ಬಾಯ್ಬಿಟ್ಟಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಮತ್ತೆ 14 ದಿನ ಅವರನ್ನು ಕಸ್ಟಡಿಗೆ ನೀಡಬೇಕು’ ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಪಪ್ಪಿ ಪರ ಹಿರಿಯ ವಕೀಲ ಎಚ್‌.ಎಸ್‌.ಚಂದ್ರಮೌಳಿ ಮತ್ತು ಕಿರಣ್‌ ಜವಳಿ ಅವರು ‘ವೀರೇಂದ್ರ ಅವರಿಗೆ ಕ್ರಿಮಿನಲ್‌ ಹಿನ್ನೆಲೆ ಇಲ್ಲ. ಯಾವುದೇ ಕೇಸ್‌ ಬಾಕಿ ಇಲ್ಲ. ತನಿಖೆಗೆ ಅವರ ಅಗತ್ಯವಿದ್ದರೆ ಬೆಳಗ್ಗೆಯಿಂದ ಸಂಜೆವರೆಗೆ ಅವರನ್ನು ವಿಚಾರಣೆಗೆ ಒಳಪಡಿಸಿ ಬಿಡುಗಡೆ ಮಾಡಬಹುದು. ಇದಕ್ಕಾಗಿ ಕಸ್ಟಡಿಗೆ ನೀಡುವ ಅಗತ್ಯವಿಲ್ಲ’ ಎಂದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ಮತ್ತೆ 6 ದಿನ ಇ.ಡಿ. ಕಸ್ಟಡಿಗೆ ನೀಡಿತು.

ಅಗತ್ಯ ಮೂಲಸೌಕರ್ಯ ಒದಗಿಸಿ ಪಪ್ಪಿ ಮನವಿಗೆ ಕೋರ್ಟ್‌ ಸೂಚನೆ

ಬೆಳಗಿನ ಜಾವ 3ಗಂಟೆ ವರೆಗೆ ವಿಚಾರಣೆ ಮಾಡಿದ್ದಾರೆ. ನಾನು ಸಸ್ಯಾಹಾರಿ. ಊಟಕ್ಕೆ ಮೊಸರು ನೀಡುತ್ತಿಲ್ಲ. ಸಮಸ್ಯೆ ಮಾಡುತ್ತಿದ್ದಾರೆ ಎಂದು ನ್ಯಾಯಾಲಯದ ವಿಚಾರಣೆ ವೇಳೆ ವೀರೇಂದ್ರ ಅಲವತ್ತುಕೊಂಡಿದ್ದಾರೆ.

ಈ ಸಂಬಂಧ ವೀರೇಂದ್ರ ಅವರನ್ನು 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು. ಶುದ್ಧ ಆಹಾರ, ನೀರು, ಔಷಧ ಸೇರಿ ಅಗತ್ಯ ಮೂಲಸೌಕರ್ಯ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. ವಕೀಲರ ಭೇಟಿಗೆ ಅವಕಾಶ ನೀಡಬೇಕು, ನಿಗದಿತ ವೇಳೆಯ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯ ಇ.ಡಿ. ಅಧಿಕಾರಿಗಳಿಗೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್