
ರಾಮನಗರ (ಸೆ.17): ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಕ್ಯಾಂಟರ್ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ 11 ಗೋವುಗಳನ್ನು ರಕ್ಷಿಸಿದ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸುತ್ತಿದ್ದ ದುಷ್ಕರ್ಮಿಗಳು. ಕಸಾಯಿಖಾನೆಗೆ ಸಾಗಿಸುತ್ತಿರುವ ಮಾಹಿತಿ ಪಡೆದು ಶ್ರೀರಾಮಸೇನೆ ಕಾರ್ಯಕರ್ತರು ದಾಳಿ. ಕ್ಯಾಂಟರ್ನಲ್ಲಿ ಒಟ್ಟು 11 ಗೋವುಗಳನ್ನು ಅಮಾನುಷವಾದ ರೀತಿಯಲ್ಲಿ ತುಂಬಲಾಗಿತ್ತು. ವಾಹನ ಅಡ್ಡಗಟ್ಟಿದ ಶ್ರೀರಾಮಸೇನೆ ಕಾರ್ಯಕರ್ತರು ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ರಾಮನಗರ ಪೊಲೀಸರು ಗೋವುಗಳನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
2 ಲಕ್ಷ ಗೋವುಗಳ ಹತ್ಯೆ! ಹವಾಮಾನ ಬದಲಾವಣೆ ಎದುರಿಸಲು ಐರ್ಲೆಂಡ್ ಸರ್ಕಾರದ ದುಸ್ಸಾಹಸ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ