ರಾಯಚೂರು: ಅಕ್ರಮವಾಗಿ ಸಾಗಾಟ ಆರೋಪ, ಭಜರಂಗದಳ ಕಾರ್ಯಕರ್ತರಿಂದ 19 ಗೋವುಗಳ ರಕ್ಷಣೆ

Published : Jul 06, 2024, 11:11 PM ISTUpdated : Jul 06, 2024, 11:24 PM IST
ರಾಯಚೂರು: ಅಕ್ರಮವಾಗಿ ಸಾಗಾಟ ಆರೋಪ,  ಭಜರಂಗದಳ ಕಾರ್ಯಕರ್ತರಿಂದ 19 ಗೋವುಗಳ ರಕ್ಷಣೆ

ಸಾರಾಂಶ

ಮಿನಿ ಲಾರಿಯಲ್ಲಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ವಾಹನ ತಡೆದು ಗೋವುಗಳನ್ನ ರಕ್ಷಣೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಹೊರವಲಯದ ಸಾಥ್ ಮೈಲ್ ಬಳಿ ನಡೆದಿದೆ. 

ರಾಯಚೂರು (ಜು.6): ಮಿನಿ ಲಾರಿಯಲ್ಲಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ವಾಹನ ತಡೆದು ಗೋವುಗಳನ್ನ ರಕ್ಷಣೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಹೊರವಲಯದ ಸಾಥ್ ಮೈಲ್ ಬಳಿ ನಡೆದಿದೆ. 

ಮಿನಿ ಲಾರಿಯಲ್ಲಿ 19ಕ್ಕೂ ಹೆಚ್ಚು ಗೋವುಗಳನ್ನ ಅಮಾನುಷವಾಗಿ ತುಂಬಿ ಸಾಗಾಟ. ಲಾರಿ ಚಾಲಕ ಮುಸ್ತಾಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು. ಬಳಿಕ ಲಾರಿ ಸಮೇತ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ಮುಂದೆ ತಂದು ನಿಲ್ಲಿಸಿದ ಕಾರ್ಯಕರ್ತರು. 

ಅಕ್ರಮ ಗೋವು ಸಾಗಾಟ; ಶ್ರೀರಾಮಸೇನೆ ಕಾರ್ಯಕರ್ತರಿಂದ 11 ಗೋವುಗಳ ರಕ್ಷಣೆ

ದೂರು ದಾಖಲಿಸಿಕೊಳ್ಳಲು ಹಿಂದೇಟು ಆರೋಪ:

ಮಿನಿಲಾರಿಯಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಭಜರಂಗದಳ ಕಾರ್ಯಕರ್ತರು.  ಗೋಹತ್ಯೆ ಉದ್ದೇಶದಿಂದಲೇ ಸಾಗಾಟ ಮಾಡಲಾಗುತ್ತಿತ್ತು. ಗೋ ಹತ್ಯೆ ಮಾಡುವುದು ಅಪರಾಧವಾಗಿದೆ. ಗೋವುಗಳ ಸಮೇತ ವಾಹನವನ್ನು ಠಾಣೆಗೆ ತಂದರೂ ಪ್ರಕರಣ ದಾಖಲಿಸಿಕೊಳ್ಳು ಪೊಲೀಸರು ಹಿಂದೇಟು ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ