ಪಿಎಸ್‌ಐ ನೇಮಕಾತಿ: ಪ್ರಶ್ನೆಪತ್ರಿಕೆ 1ರಲ್ಲೂ ಅಕ್ರಮ, ಬ್ಲೂಟೂತ್‌ ಬಳಕೆ ಪತ್ತೆ..!

Published : Oct 15, 2022, 11:28 AM IST
ಪಿಎಸ್‌ಐ ನೇಮಕಾತಿ: ಪ್ರಶ್ನೆಪತ್ರಿಕೆ 1ರಲ್ಲೂ ಅಕ್ರಮ, ಬ್ಲೂಟೂತ್‌ ಬಳಕೆ ಪತ್ತೆ..!

ಸಾರಾಂಶ

ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆರೋಪಿಗಳ ಬಂಧನ ಸಾಧ್ಯತೆ ಹಾಗೂ ತುಮಕೂರು ದಾವಣಗೆರೆಗೂ ಇದರ ಲಿಂಕ್‌ ಕುರಿತು ವರದಿ ಮಾಡಿದ್ದ ಕನ್ನಡಪ್ರಭ 

ಆನಂದ್‌ ಎಂ. ಸೌದಿ

ಯಾದಗಿರಿ(ಅ.15):  ಪಿಎಸ್‌ಐ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ-1ರಲ್ಲಿಯೂ (ಭಾಷಾಂತರ, ಪ್ರಬಂಧ ಹಾಗೂ ಸಾರಾಂಶ) ಅಕ್ರಮ ನಡೆದಿರುವ ಬಗ್ಗೆ ತಿಳಿದುಬಂದಿದೆ. ಗುರುವಾರ ಸಿಐಡಿ ಪೊಲೀಸರು ಬಂಧಿಸಿದ ಮೂವರು ಆರೋಪಿ ಅಭ್ಯರ್ಥಿಗಳ ಪೈಕಿ, ಧಾರವಾಡದ ಶ್ರೀಮಂತ ಸತಾಪುರ ಈ ತರಹದ ಅಕ್ರಮ ನಡೆಸಿದ್ದ ಎಂಬುದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಇಷ್ಟುದಿನ ಪ್ರಶ್ನೆ ಪತ್ರಿಕೆ-2ರಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿತ್ತು. ಈಗ ಮೊದಲ ಬಾರಿ ಪ್ರಶ್ನೆಪತ್ರಿಕೆ-1ರಲ್ಲೂ ಅಕ್ರಮ ಬೆಳಕಿಗೆ ಬಂದಿದೆ.

ತಾಂತ್ರಿಕ ವಿಶ್ಲೇಷಣೆ ಹಾಗೂ ವೈಜ್ಞಾನಿಕ ವಿಧಾನದಿಂದ ಇಂತಹ ಅಕ್ರಮ ಪತ್ತೆ ಮಾಡಿರುವ ಸಿಐಡಿ ತಂಡ, ಧಾರವಾಡದ ಪರೀಕ್ಷಾ ಕೇಂದ್ರಕ್ಕೆ ಸಂಪರ್ಕಿಸುವ ಎಲ್ಲ ಮೊಬೈಲ್‌ ಕಂಪನಿಗಳ ಸೆಲ್‌ ಐಡಿ ಪಡೆದು, ಸಂಬಂಧಿಸಿದ ಎಲ್ಲ ಮೊಬೈಲ್‌ ಕಂಪನಿ ಸವೀರ್‍ಸ್‌ ಪ್ರೊವೈಡರ್‌ಗಳಿಗೆ ಕಳುಹಿಸಿ ಅಲ್ಲಿ ಬಂದ ಕರೆಗಳ ಸಾಕ್ಷ್ಯಾಧಾರಗಳ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.

PSI Recruitment Scam:ಪಿಎಸ್‌ಐ ಅಕ್ರಮ: ತುಮಕೂರು, ದಾವಣಗೆರೆ, ಮೂಡಬಿದಿರೆಗೂ ಲಿಂಕ್‌..!

ಬೆಳಿಗ್ಗೆ ನಡೆದ ಪರೀಕ್ಷೆ ವೇಳೆ 4 ಬಾರಿ ಸಂಪರ್ಕ ನಡೆದಿರುವುದು ತಾಂತ್ರಿಕ ತನಿಖೆಯಲ್ಲಿ ಪತ್ತೆಯಾಗಿದೆ. ಸುಮಾರು ಅರ್ಧಗಂಟೆಗಳ ಕಾಲ ಸಂಪರ್ಕ ಏರ್ಪಟ್ಟಿತ್ತು. ಪ್ರಬಂಧ ಹಾಗೂ ಭಾಷಾಂತರದ ಈ ಪತ್ರಿಕೆಯಲ್ಲಿ ಉತ್ತರಗಳನ್ನು ಬ್ಲೂಟೂತ್‌ ಮೂಲಕ ಕೇಳಿಸಿಕೊಂಡು ಬರೆಯಲಾಗಿದೆ.

ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆರೋಪಿಗಳ ಬಂಧನ ಸಾಧ್ಯತೆ ಹಾಗೂ ತುಮಕೂರು ದಾವಣಗೆರೆಗೂ ಇದರ ಲಿಂಕ್‌ ಕುರಿತು ಕನ್ನಡಪ್ರಭ ವರದಿ ಮಾಡಿತ್ತು. ಮುಂಬರುವ ದಿನಗಳಲ್ಲಿ ಇನ್ನೂ ಕೆಲವರನ್ನು ಬಂಧಿಸಲಾಗುತ್ತದೆ ಎಂದು ಸಿಐಡಿ ಮೂಲಗಳು ಕನ್ನಡಪ್ರಭಕ್ಕೆ ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ