
ಬೆಂಗಳೂರು(ಆ.19): ವಿವಾಹಕ್ಕೂ ಮುನ್ನ ಗರ್ಭಧರಿಸಿದ್ದ ಯುವತಿಗೆ ಅಕ್ರಮವಾಗಿ ಹೆರಿಗೆ ಮಾಡಿಸಿದ ಪರಿಣಾಮ ಮಗು ಸಾವಿಗೀಡಾಗಿದೆ ಎಂಬ ಆರೋಪ ನಗರದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿ ಬಂದಿದೆ
ಚಿಕ್ಕಮಗಳೂರು ಮೂಲದ ಯುವಕ ಮತ್ತು ಬೆಂಗಳೂರಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಯುವತಿ ಗರ್ಭ ಧರಿಸಿದ್ದು, ಇದಕ್ಕೆ ಆಕೆಯ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಯುವತಿಗೆ ಅಕ್ರಮವಾಗಿ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಆಸ್ಪತ್ರೆಯ ವೈದ್ಯರು ಶಾಮೀಲಾಗಿದ್ದಾರೆ ಎಂದು ಯುವಕನ ಆಪ್ತ ವಕೀಲ ನಿತಿನ್ ಎಂಬುವರು ಆರೋಪಿಸಿದ್ದಾರೆ. ನಗರದ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸದೆ ಯುವತಿಯ ಪೋಷಕರು ಮತ್ತು ಆಸ್ಪತ್ರೆ ಸಿಬ್ಬಂದಿಯನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಎಂದು ಅವರು ದೂರಿದರು.
ಪುಟ್ಟ ಕಂದನಿಗೆ ಜನ್ಮ ಕೊಟ್ಟ 13 ವರ್ಷದ ರೇಪ್ ಸಂತ್ರಸ್ತೆ!
ಮೃತ ಮಗುವಿನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೈಗ್ರೌಂಡ್ಸ್ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ