
ಬೆಂಗಳೂರು (ಫೆ.13): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆ ನಡೆಸುವುದಕ್ಕೆ ಸಿಬಿಐ ಗೆ ನೀಡಲಾಗಿದ್ದ ಅನುಮತಿಯನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿರುವ ಸಿಬಿಐ, ತನಿಖೆ ಮುಗಿಯುವ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದೆ. ರಾಜ್ಯ ಸರ್ಕಾರ ಡಿಸೆಂಬರ್ 22ರಂದು ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು.
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದೇ ದೊಡ್ಡ ಸವಾಲಾಗಿದೆ: ಡಿಕೆ ಶಿವಕುಮಾರ
ಲೋಕಾಯುಕ್ತ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿದೆ. ಸಿಬಿಐ ಮೇಲ್ಮನವಿ ಅರ್ಜಿಯ ತೀರ್ಪನ್ನು ಎದುರು ನೋಡುತ್ತಿದ್ದು ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆಯೇ? ಎಂಬುದನ್ನು ಕಾದುನೋಡುತ್ತೇವೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐ ಗೆ ಹೇಳಿದ್ದಾರೆ.
ನಾವು ಏನೇ ಗಳಿಸಿದ್ರೂ ಅದನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ: ಸುತ್ತೂರು ಜಾತ್ರೆಯಲ್ಲಿ ಡಿಕೆಶಿ ಮಾತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ