
ಮದ್ದೂರು : ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನಾಗಲೀ ಅಥವಾ ನನ್ನ ಕುಟುಂಬದವರಾಗಲೀ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಕೇಂದ್ರ ಮಾಜಿ ಸಚಿವ ಎಸ್.ಎಂ. ಕೃಷ್ಣ ಶನಿವಾರ ಸ್ಪಷ್ಟಪಡಿಸಿದ್ದಾರೆ.
ತಾಲೂಕಿನ ಗಡಿ ಭಾಗ ನಿಡಘಟ್ಟದಲ್ಲಿ ಬಿಜೆಪಿ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬರುವ ನಿರೀಕ್ಷೆ ಇದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಬಿಜೆಪಿ ಪ್ರಬಲವಾಗುತ್ತಿದೆ. ಈ ಮಾತಿಗೆ ಸಾಕ್ಷಿಯಾಗಿ ಹಿಂದಿನ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪಡೆದಿರುವ ಮತಗಳು ದಾಖಲಾಗಿವೆ. ರಾಜ್ಯದಲ್ಲಿರುವ ನನ್ನ ಬೆಂಬಲಿಗರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಂತೆ ತಿಳಿಸಲಾಗಿದೆ. ಈ ಬಗ್ಗೆ ನಿರಂತರವಾಗಿ ಬೆಂಬಲಿಗರ ಜೊತೆ ಮಾತನಾಡುತ್ತಿದ್ದೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಇಂದಿನಿಂದ ಲೋಕಸಭಾ ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಲಾಗುವುದು. ಇವತ್ತು ಪ್ರಚಲಿತ ದೇಶದ ಪರಿಸ್ಥಿತಿ ವಿನಿಮಯ ಮಾಡುವ ಸಭೆಯಾಗಿ ಇದಾಗಿದೆ. ನಮ್ಮ ಗಮನವೆಲ್ಲಾ ಲೋಕಸಭಾ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಬಿಜೆಪಿಗೆ ದೊಡ್ಡ ಬೆಂಬಲ ಸಿಗುವ ನಿರೀಕ್ಷೆ ಇದೆ ಎಂದರು.
ಸುಮಲತಾ ವಿಚಾರ ಗೊತ್ತಿಲ್ಲ:
ಸುಮಲತಾ ಅಂಬರೀಶ್ ಬಿಜೆಪಿಗೆ ಬರುವ ವಿಚಾರ ನನಗೆ ಗೊತ್ತಿಲ್ಲ. ಅದು ಸ್ಥಳೀಯ ನಾಯಕರು ಕಾರ್ಯಕರ್ತರಿಗೆ ಬಿಟ್ಟವಿಚಾರ ಎಂದು ಹೇಳಿ ಜಾರಿಕೆ ಉತ್ತರ ನೀಡಿದ ಕೃಷ್ಣ, ಈಗ ನಮ್ಮ ಗಮನ ಲೋಕಸಭಾ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ. ಬಿಜೆಪಿಗೆ ದೊಡ್ಡ ಬೆಂಬಲ ಸಿಗುವ ನಿರೀಕ್ಷೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ