ಉತ್ತರ ಕೊಡೋಕೆ ನಾನು ಸಿದ್ಧ-ಪಾಪ ಅವರೇನ್ ಮಾಡ್ತಾರೆ : ರಮೇಶ್‌ ಜಾರಕಿಹೊಳಿ

Kannadaprabha News   | Asianet News
Published : Dec 02, 2020, 07:57 AM IST
ಉತ್ತರ ಕೊಡೋಕೆ ನಾನು ಸಿದ್ಧ-ಪಾಪ ಅವರೇನ್ ಮಾಡ್ತಾರೆ : ರಮೇಶ್‌ ಜಾರಕಿಹೊಳಿ

ಸಾರಾಂಶ

ನಾನು  ಅವರಿಗೆ ಉತ್ತರ ಕೊಡೋಕೆ ಸಿದ್ಧನಿದ್ದೇನೆ. ಪಾಪ ಅವರೇನ್ ಮಾಡ್ತಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. 

ಬೆಳಗಾವಿ (ಡಿ.02): ಮಹದಾಯಿ ವಿಚಾರದಲ್ಲಿ ಕಾನೂನು ಬದ್ಧವಾಗಿ ನಾವು ನಮ್ಮ ಸರ್ಕಾರ ತಯಾರಿದ್ದು, ನಮ್ಮ ರಾಜ್ಯದ ಹಿತದಿಂದ ಈ ಕುರಿತು ಮಾಧ್ಯಮಗಳಲ್ಲಿ ಮಾತನಾಡುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. 

ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಅವರ ಹೇಳಿಕೆ ಕುರಿತು ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಗೋವಾದವರು ಯಾವುದೇ ರೂಪದಲ್ಲಿ ಬಂದರೂ ಉತ್ತರ ಕೊಡಲು ನಾವು ಸಿದ್ಧರಿದ್ದೇವೆ. ಪಾಪ ಅವರಿಗೆ ಅನಿವಾರ್ಯವಿದೆ. ಹೀಗಾಗಿ ಗೋವಾ ಮುಖ್ಯಮಂತ್ರಿ ಅವರ ರಾಜ್ಯದ ಪರವಾಗಿ ಮಾತನಾಡಿದ್ದಾರೆ. ನಮ್ಮ ರಾಜ್ಯದ ಹಿತಾಸಕ್ತಿ ಪರವಾಗಿ ನಾವಿದ್ದೇವೆ. ಈ ವಿಚಾರವಾಗಿ ಈಗಾಗಲೇ ನಾನು ಸ್ಪಷ್ಟವಾಗಿ ಹೇಳಿಕೆ ನೀಡಿದ್ದೇನೆ. ಪದೇ ಪದೆ ಹೇಳಿಕೆ ನೀಡುವುದಿಲ್ಲ ಎಂದರು.

ಕರ್ನಾಟಕ ವಿರುದ್ಧ ಅಮಿತ್‌ ಶಾಗೆ ಗೋವಾ ದೂರು

 ಮಹದಾಯಿ ನದಿ ತಿರುವು ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನಮ್ಮ ಕಳವಳ ತಿಳಿಸಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮಂಗಳವಾರ ಹೇಳಿದ್ದಾರೆ.

ಚಾಲೇಂಜ್ ಹಾಕಿದ ಸಾಹುಕಾರ್ : ನನ್ನ ರಾಜೀನಾಮೆ ಖಚಿತ ಎಂದ ರಮೇಶ್ ಜಾರಕಿಹೊಳಿ

ಸುದ್ದಿಗಾರರ ಜತೆ ಮಾತನಾಡಿದ ಸಾವಂತ್‌, ‘ಶಾ ಅವರಿಗೆ ನಮ್ಮ ಕಳವಳ ತಿಳಿಸಿದ್ದೇವೆ. ಕರ್ನಾಟಕ ನದಿ ತಿರುವು ಮಾಡಿದ ಬಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲ ಸಾಕ್ಷ್ಯ ಕೂಡ ಕೊಟ್ಟಿದ್ದೇವೆ’ ಎಂದರು.

ಅಲ್ಲದೆ, ‘ಕರ್ನಾಟಕದ ಯಾವುದೇ ಸಚಿವರ ಜತೆ ನದಿ ವಿವಾದ ಕುರಿತು ಮುಖಾಮುಖಿ ಮಾತುಕತೆಗೆ ನಾನು ಸಿದ್ಧನಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸೋಮವಾರವಷ್ಟೇ ಕರ್ನಾಟಕದ ಜಲ ಸಚಿವ ರಮೇಶ ಜಾರಕಿಹೊಳಿ ಅವರು, ‘ಕರ್ನಾಟಕ ಮಹದಾಯಿ ತಿರುಗಿಸಿದೆ ಎಂಬ ಗೋವಾ ಆರೋಪ ಸುಳ್ಳು. ಅದು ಸಾಬೀತಾದರೆ ರಾಜೀನಾಮೆಗೆ ಸಿದ್ಧ. ಬೇಕಿದ್ದರೆ ಗೋವಾ ಮುಖ್ಯಮಂತ್ರಿಯು ಕಳಸಾ ಬಂಡೂರಿಗೆ ಬಂದು ನೋಡಲಿ’ ಎಂದು ಸವಾಲು ಹಾಕಿದ್ದರು. ಅದರ ಬೆನ್ನಲ್ಲೇ ಸಾವಂತ್‌ ಅವರ ಈ ಹೇಳಿಕೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!