
ಬೆಂಗಳೂರು (ಜ.17): ಕೊರೋನಾ ಲಸಿಕೆ ಪಡೆಯಲು ನಾನು ಸಿದ್ಧನಿದ್ದೇನೆ. ನನಗೆ ಲಸಿಕೆ ಪಡೆಯಲು ಯಾವಾಗ ಸೂಚಿಸುತ್ತಾರೋ ಆಗ ಖಂಡಿತಾ ಲಸಿಕೆ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಲಸಿಕೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಇಷ್ಟುಕಡಿಮೆ ಅವಧಿಯಲ್ಲಿ ಲಸಿಕೆ ಲಭ್ಯವಾಗಿರುವುದು ಸಂತಸದ ಸಂಗತಿ. ಇದಕ್ಕಾಗಿ ಸಂಶೋಧಕರಿಗೆ, ಕೊರೋನಾ ವಾರಿಯರ್ಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು ನಮ್ಮ ಸಮ್ಮುಖದಲ್ಲೇ ಬಿಡದಿ ಮೂಲದ ಕೆ. ನಾಗರತ್ನಾ ಎಂಬುವವರು ಲಸಿಕೆ ಪಡೆದರು. ಹೀಗಾಗಿ ಲಸಿಕೆ ಕುರಿತು ಯಾರೂ ಆತಂಕಪಡಬೇಕಿಲ್ಲ ಎಂದು ಹೇಳಿದರು.
ಬೆಂಗ್ಳೂರಿನ 8 ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ...
ಈ ವೇಳೆ ನೀವು ಯಾವಾಗ ಲಸಿಕೆ ಪಡೆಯುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಲಸಿಕೆ ಪಡೆಯಲು ಸಿದ್ಧನಿದ್ದೇನೆ. ಅವರು (ಆರೋಗ್ಯ ಇಲಾಖೆ ಮಾರ್ಗ ಸೂಚಿ) ಯಾವಾಗ ಲಸಿಕೆ ಪಡೆಯಲು ಹೇಳುತ್ತಾರೋ ಆಗ ಖಂಡಿತಾ ಲಸಿಕೆ ಪಡೆಯುತ್ತೇನೆ. ಲಸಿಕೆಯ ಸುರಕ್ಷತೆಯ ಬಗ್ಗೆ ಗೊಂದಲಗಳು ಉಂಟಾಗಬಾರದು ಎಂಬ ಕಾರಣಕ್ಕಾಗಿಯೇ ಡಾ.ಸುದರ್ಶನ್ ಬಲ್ಲಾಳ್ ಸೇರಿದಂತೆ ಆರೋಗ್ಯ ಕ್ಷೇತ್ರದ ಹಲವು ಗಣ್ಯರು ಲಸಿಕೆ ಪಡೆದಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ