ನನ್ನ ಮೇಲೆ ಐಟಿ ರೇಡ್‌ ಆದರೆ ಬಿಎಸ್‌ವೈ ಆಸ್ತಿ ದಾಖಲೆ ಸಿಗುತ್ತೆ!

Published : Oct 23, 2019, 10:10 AM ISTUpdated : Oct 23, 2019, 04:32 PM IST
ನನ್ನ ಮೇಲೆ ಐಟಿ ರೇಡ್‌ ಆದರೆ ಬಿಎಸ್‌ವೈ ಆಸ್ತಿ ದಾಖಲೆ ಸಿಗುತ್ತೆ!

ಸಾರಾಂಶ

ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐನವರು ನನ್ನ ಮನೆಗೆ ಬರಲಿ ಅಂತಾ ಕಾಯ್ತಾ ಇದ್ದೀನಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ [ಅ.23]:  ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐನವರು ನನ್ನ ಮನೆಗೆ ಬರಲಿ ಅಂತಾ ಕಾಯ್ತಾ ಇದ್ದೀನಿ. ಅವರು ಬಂದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೊಂದಿರುವ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಆಸ್ತಿ-ಪಾಸ್ತಿಗಳ ಕುರಿತು ನನ್ನಲ್ಲಿರುವ ದಾಖಲೆ ಪ್ರದರ್ಶಿಸುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿ ಲೂಟಿ ಮಾಡಿಲ್ಲ. ಆದ್ದರಿಂದ ಆರಾಮವಾಗಿದ್ದೇನೆ. ಜನರೆಂಬ ಆಸ್ತಿ ಸಂಪಾದನೆ ಮಾಡಿದ್ದೇನೆ. ಕೇಂದ್ರ ಮತ್ತು ರಾಜ್ಯದ ಯಾವುದೇ ತನಿಖಾ ಸಂಸ್ಥೆಗಳು ಬಂದರೆ ಹೆದರುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ನನ್ನ ಮನೆಗೆ ಬಂದರೆ ಯಡಿಯೂರಪ್ಪನವರ ಆಸ್ತಿ ದಾಖಲೆ ತೆಗೆದುಕೊಂಡು ಹೋಗಬೇಕೇ ಹೊರತು ಇನ್ನೇನೂ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರೇನು ಬಿಕಾರಿಗಳಾ?: 

ಐಟಿ ದಾಳಿಗಳು ನಿಜವಾದ ಮಾಹಿತಿ ಆಧರಿಸಿ ನಡೆಯುತ್ತಿವೆಯೇ? ಬಿಜೆಪಿಯವರು ಬಿಕಾರಿಗಳಾ ಎಂದು ಪ್ರಶ್ನಿಸಿದ ಅವರು, ನಾನು ಐಟಿ ದಾಳಿಯನ್ನು ವಿರೋಧಿಸುವುದಿಲ್ಲ. ಆದರೆ, ವಿರೋಧ ಪಕ್ಷದ ಮುಖಂಡರನ್ನು ದಮನಿಸಲು ಅದನ್ನು ಬಳಸಲಾಗುತ್ತಿದೆ. ಈ ಮೂಲಕ ಸಂವಿಧಾನಿಕ ಸಂಸ್ಥೆಗಳನ್ನು ಇಡೀ ದೇಶದಲ್ಲಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ದೇಶದಲ್ಲಿ ಸಂವಿಧಾನದತ್ತವಾದ ಎಲ್ಲಾ ಸಂಸ್ಥೆಗಳನ್ನು ಬಿಜೆಪಿ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ದೇಶದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ರಿಟಿಷರ ಆಳ್ವಿಕೆಯಲ್ಲೂ ಇಂಥ ಕೆಟ್ಟಸ್ಥಿತಿ ಇರಲಿಲ್ಲ. ಈ ಕಾರಣದಿಂದ ಮತ್ತೊಮ್ಮೆ ದೇಶದಲ್ಲಿ ಕ್ರಾಂತಿ ಆಗಬೇಕಿದೆ. ಈ ನಿಟ್ಟಿನಲ್ಲಿ ಬಿಜೆಪಿ ವಿರೋಧಿ ಹೋರಾಟದ ನೇತೃತ್ವವನ್ನು ಯಾರಾದರೂ ವಹಿಸಿಕೊಳ್ಳಬೇಕಿದೆ.

ಅಕ್ಟೋಬರ್ 23ರ ಟಾಪ್ 10 ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ:

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್