Rain In Karnataka ಕರ್ನಾಟಕದಲ್ಲಿ 2 ದಿನ ಮಳೆ, ಹೊಸ ವರ್ಷದ ಮೊದಲ ದಿನವೇ ವರ್ಷಧಾರೆ

Published : Dec 31, 2021, 08:37 PM IST
Rain In Karnataka ಕರ್ನಾಟಕದಲ್ಲಿ 2 ದಿನ ಮಳೆ,  ಹೊಸ ವರ್ಷದ ಮೊದಲ ದಿನವೇ ವರ್ಷಧಾರೆ

ಸಾರಾಂಶ

* ಕರ್ನಾಟಕದಲ್ಲಿ 2 ದಿನ ಮಳೆ ಮುನ್ಸೂಚನೆ * ಹೊಸ ವರ್ಷದ ಮೊದಲ ದಿನವೇ ವರ್ಷಧಾರೆ * ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, (ಡಿ.31): 2021 ಕೊನೆಯಾಗಲು ಕ್ಷಣಗಣನೆ ಆರಂಭವಾಗಿದ್ದು, 2022 ಹೊಸ ವರ್ಷ ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ, ಹೊಸ ವರ್ಷದ(New Year) ಮೊದಲ ದಿನವೇ ವರ್ಷಧಾರೆ ಮುನ್ಸಚೂನೆ ಸಿಕ್ಕಿದೆ.

ಹೌದು...ರಾಜ್ಯದ ಹಲವೆಡೆ ಜ.1 ಮತ್ತು 2ರಂದು ಮಳೆಯಾಗಲಿದೆ(Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ.

Corona Update: ವರ್ಷದ ಕೊನೆ ದಿನ ಕರ್ನಾಟಕದಲ್ಲಿ ಕೊರೋನಾ ಶಾಕ್

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ ಎಂದು ವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಇನ್ನು  ಶುಕ್ರವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. 

ಇನ್ನು ಈ ಬಗ್ಗೆ ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಮೋಡ ಕವಿದ ವಾತಾವರಣ ಜತೆಗೆ ಮೇಲ್ಮೈ ಸುಳಿಗಾಳಿ ಹಾಗೂ ನೆರೆಯ ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಮಳೆಯಾಗಲಿದೆ. ತಮಿಳುನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದರು.

ನವೆಂಬರ್‌ನಲ್ಲಿ ಅಬ್ಬರಿಸಿದ್ದ ಮಳೆರಾಯ
ರಾಜ್ಯದಲ್ಲಿ ನವೆಂಬರ್‌ನಲ್ಲಿ ಮಳೆರಾಯ ಅಬ್ಬರಿಸಿದ್ದ. ಇದರಿಂದ ರೈತರು ಬೆಳೆ ಬೆಳೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ರೈತರು ಇನ್ನು ಸಹ ಆ ಹಾನಿಯಿಂದ ಹೊರಬಂದಿಲ್ಲ. ಯಾಕಂದ್ರೆ ಕೈಗೆ ಬಂದಿದ್ದ ಬೆಳೆ ಬಾಯಿಗೆ ಬಂದಿದ್ದು ಮಾತ್ರ ಸ್ವಲ್ಪ. ಇನ್ನು ಸ್ವಲ್ಪ ಮಣ್ಣು ಪಾಲಾಗಿತ್ತು. 

2021ರ ಪ್ರಾರಂಭದಲ್ಲಿ ಮೊದಲ ಅಲೆಯಿಂದ ಚೇತರಿಸಿಕೊಂಡು ಮತ್ತೆ ಜೀವನೋತ್ಸಾಹದಲ್ಲಿ ಸಾಗಬೇಕು ಎನ್ನುವಷ್ಟರಲ್ಲಿಯೇ ವಕ್ಕರಿಸಿದ ಕೋವಿಡ್‌(Covid19) ಎರಡನೇ ಅಲೆ ಜನರ ಬದುಕು ಛಿದ್ರಗೊಳಿಸಿ ಅಪಾರ ಸಾವು ನೋವಿಗೆ ಕಾರಣವಾಗಿತ್ತು. ಇಂಥ ಕಷ್ಟಗಳ ಸರಮಾಲೆಯ ನಡುವೆ ಮತ್ತೆ ಬದುಕು ಕಟ್ಟಿಕೊಳ್ಳಬೇಕು ಎನ್ನುವಾಗಲೇ ವರ್ಷದ ಕೊನೆಯಲ್ಲಿ ವಕ್ಕರಿಸಿರುವ ಒಮಿಕ್ರೋನ್‌(Omicron) ಜಿಲ್ಲೆಗೆ ಕಾಲಿಟ್ಟಲ್ಲವಾದರೂ ಆತಂಕ ಸೃಷ್ಟಿಸಿದೆ. ಈ ಆತಂಕ ಆರಂಭದಲ್ಲಿಯೇ ದೂರವಾಗಲಿ, ಅದು ಎದುರಾಗದಿರಲಿ ಎಂಬ ಪ್ರಾರ್ಥನೆಯೊಂದಿಗೆ 2022 ಸ್ವಾಗತಿಸಲು ಜನರು ಸಿದ್ಧರಾಗಿದ್ದಾರೆ.

ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ (Coroanvrius) ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ ಒಂದುವಾರದಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರವೂ ಸಹ ಅಲರ್ಟ್ ಆಗಿದೆ.

ರಾಜ್ಯದಲ್ಲಿಇಂದು(ಶುಕ್ರವಾರ) ಒಂದೇ ದಿನ 832 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.  335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ರಷ್ಟಿದ್ರೆ, ಸಾವಿನ  ಪ್ರಮಾಣ ಶೇ 0.96% ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!