ರಾಮಮಂದಿರ ಲೋಕಾರ್ಪಣೆ ಎಲ್ಲ ಹಳ್ಳಿಗಳಲ್ಲೂ ನೇರ ಪ್ರಸಾರ

Published : Dec 28, 2023, 10:22 AM IST
ರಾಮಮಂದಿರ ಲೋಕಾರ್ಪಣೆ ಎಲ್ಲ ಹಳ್ಳಿಗಳಲ್ಲೂ ನೇರ ಪ್ರಸಾರ

ಸಾರಾಂಶ

ರಾಜ್ಯದಲ್ಲಿ 29 ಸಾವಿರಕ್ಕೂ ಹೆಚ್ಚಿನ ಗ್ರಾಮದ ಪ್ರತಿ ಮನೆಗಳನ್ನು ತಲುಪಿ ಸಂಪರ್ಕ ಅಭಿಯಾನ ಆಯೋಜಿಸಿದ್ದೇವೆ. ಜ.7ರಂದು ಮಹಾಸಂಪರ್ಕ ಅಭಿಯಾನ ನಡೆಯಲಿದೆ. ಅಭಿಯಾನದ ಪ್ರಯುಕ್ತ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ಶ್ರೀರಾಮ ಮಂದಿರದ ಚಿತ್ರ ಹಾಗೂ ಮಂದಿರ ನಿರ್ಮಾಣದ ಇತಿಹಾಸ ತಿಳಿಸುವ ನಿವೇದನಾ ಪತ್ರ ವಿತರಣೆ ಮಾಡಲಾಗುತ್ತಿದೆ. 

ಬೆಂಗಳೂರು(ಡಿ.28):  ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಕರ್ನಾಟಕ ದಕ್ಷಿಣ ಪ್ರಾಂತ ವ್ಯಾಪ್ತಿಯಲ್ಲಿ ಜ.1ರಿಂದ ಜ.15ರವರೆಗೆ ಮಂತ್ರಾಕ್ಷತೆ, ನಿವೇದನಾ ಪತ್ರ ನೀಡುವ ಸಂಪರ್ಕ ಅಭಿಯಾನ ಹಮ್ಮಿಕೊಂಡಿರುವುದಾಗಿ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ 29 ಸಾವಿರಕ್ಕೂ ಹೆಚ್ಚಿನ ಗ್ರಾಮದ ಪ್ರತಿ ಮನೆಗಳನ್ನು ತಲುಪಿ ಸಂಪರ್ಕ ಅಭಿಯಾನ ಆಯೋಜಿಸಿದ್ದೇವೆ. ಜ.7ರಂದು ಮಹಾಸಂಪರ್ಕ ಅಭಿಯಾನ ನಡೆಯಲಿದೆ. ಅಭಿಯಾನದ ಪ್ರಯುಕ್ತ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ಶ್ರೀರಾಮ ಮಂದಿರದ ಚಿತ್ರ ಹಾಗೂ ಮಂದಿರ ನಿರ್ಮಾಣದ ಇತಿಹಾಸ ತಿಳಿಸುವ ನಿವೇದನಾ ಪತ್ರ ವಿತರಣೆ ಮಾಡಲಾಗುತ್ತಿದೆ ಎಂದರು.

ಅಯೋಧ್ಯೆ ಧರ್ಮಪಥದಲ್ಲಿ 40 ಸೂರ್ಯಸ್ತಂಭ ನಿರ್ಮಾಣ: ಉರಿದಾಗ ಸೂರ್ಯನಂತೆ ಕಂಗೊಳಿಸಲಿರುವ ಬೀದಿದೀಪಗಳು

ಈ ಅಭಿಯಾನದಲ್ಲಿ ವಿಹಿಂಪದ 1.50 ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದು, ಇವರು ಮನೆಮನೆಗೆ ತೆರಳಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಜ. 22ರಂದು ಪ್ರತಿ ಗ್ರಾಮದ ದೇವಸ್ಥಾನಗಳಲ್ಲಿ ಎಲ್ಲರೂ ಸೇರಿ ಭಜನೆ, ಸತ್ಸಂಗ, ರಾಮತಾರಕ ಮಂತ್ರವನ್ನು 108 ಬಾರಿ ಜಪಿಸುವಂತೆ ಕೋರಲಿದ್ದಾರೆ. ಅಂದು ಸಂಜೆ ಗ್ರಾಮದ ಮನೆಗಳ ಎದುರು ದೀಪಾವಳಿ ಹಬ್ಬದ ರೀತಿ ಐದು ದೀಪವನ್ನು ಬೆಳಗುವಂತೆ ಕರೆ ಕೊಡಲಿದ್ದಾರೆ. ದೇವಸ್ಥಾನಗಳಲ್ಲಿ ಎಲ್‌ಇಡಿ ಸ್ಕ್ರೀನ್‌ ಅಳವಡಿಸಿ ಭಕ್ತರಿಗೆ ಅಯೋಧ್ಯೆ ಕಾರ್ಯಕ್ರಮ ನೇರ ವೀಕ್ಷಣೆಗೆ ಅನುವು ಮಾಡಿಕೊಡಲಿದ್ದೇವೆ ಎಂದು ತಿಳಿಸಿದರು.

ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಿಂದ ಸುಮಾರು ₹180 ಕೋಟಿ-₹200 ಕೋಟಿಯಷ್ಟು ದೇಣಿಗೆ ಸಂಗ್ರಹವಾಗಿತ್ತು. ಆಗಲೂ ಸುಮಾರು 1 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈಗ ಉದ್ಘಾಟನೆ ಸಂಬಂಧ ನಡೆಸುತ್ತಿರುವ ಸಂಪರ್ಕ ಅಭಿಯಾನದಲ್ಲಿ ಯಾವುದೇ ರೀತಿಯ ಹಣ, ನಿಧಿ ಸಂಗ್ರಹಿಸುತ್ತಿಲ್ಲ. ಭಕ್ತರೂ ನೀಡಬಾರದು ಎಂದು ಹೇಳಿದರು.

ಇನ್ನು ರಾಮ ಮಂದಿರ ನಿರ್ಮಾಣದಲ್ಲಿ ಶ್ರಮಿಸಿದ, ವಿವಿಧ ಹಂತದಲ್ಲಿ ದುಡಿದ ಸುಮಾರು 3500 ಕಾರ್ಯಕರ್ತರು ಫೆ. 17ರಂದು ರಾಜ್ಯದಿಂದ ಅಯೋಧ್ಯೆಗೆ ತೆರಳಲಿದ್ದಾರೆ. ಫೆ. 19ರಂದು ದರ್ಶನ ಪಡೆದು ವಾಪಸ್ಸಾಗುವರು. ಇವರಿಗೆ ಊಟ, ವಸತಿಯನ್ನು ಅಯೋಧ್ಯೆ ಟ್ರಸ್ಟ್‌ ವ್ಯವಸ್ಥೆ ಮಾಡಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!