ಪರಿಸ್ಥಿತಿ ನೋಡಿಕೊಂಡು ಸಿಇಟಿ, ಇನ್ನಿತರ ಪರೀಕ್ಷೆ: ಶಿಕ್ಷಣ ಇಲಾಖೆ

Kannadaprabha News   | Asianet News
Published : Mar 23, 2020, 09:22 AM IST
ಪರಿಸ್ಥಿತಿ ನೋಡಿಕೊಂಡು ಸಿಇಟಿ, ಇನ್ನಿತರ ಪರೀಕ್ಷೆ: ಶಿಕ್ಷಣ ಇಲಾಖೆ

ಸಾರಾಂಶ

ದೇಶಾದ್ಯಂತ ಕೊರೋನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ಇನ್ನಿತರ ಪರೀಕ್ಷೆಗಳನ್ನು ಆಯೋಜಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು (ಮಾ. 23): ದೇಶಾದ್ಯಂತ ಕೊರೋನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ಇನ್ನಿತರ ಪರೀಕ್ಷೆಗಳನ್ನು ಆಯೋಜಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಾಲೇಜುಗಳು ಹಾಗೂ ಸಂಸ್ಥೆಗಳು ಕೊರೋನಾ ವೈರಸ್‌ ತಡೆಗಟ್ಟಲು ಕೈಗೊಳ್ಳಬೇಕಿರುವ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರಲ್ಲಿ 120 ವರ್ಷದ ಹಿಂದೆಯೇ 3 ಸಾವಿರ ಜನರ ಬಲಿ ಪಡೆದಿತ್ತು ಈ ರೋಗ!

ಸೋಂಕಿನ ಕುರಿತು ಸಂದೇಶಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು, ಸ್ವಯಂಸೇವಕರ ಗುಂಪುಗಳನ್ನು ರಚಿಸಿ ಧ್ವನಿವರ್ಧಕದ ಮೂಲಕ ಅರಿವು ಮೂಡಿಸುವುದು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ತುರ್ತು ಸೇವೆಗಳಿಗೆ ನಿಯೋಜಿಸುವುದು. ತುರ್ತು ಮತ್ತು ಮುಖ್ಯವಾದ ಕೆಲಸಗಳ ನಿರ್ವಹಣೆಗೆ ಅನುಕೂಲವಾಗುವಂತೆ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು ಮತ್ತು ಪಾಲಿಟೆಕ್ನಿಕ್‌/ ಕಾಲೇಜುಗಳ ಪ್ರಾಂಶುಪಾಲರು ಪ್ರತಿದಿನ ಹಾಜರಿರಬೇಕು. ವೈರಾಣು ತಡೆಗಟ್ಟಲು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನೋಡಲ್‌ ಅಧಿಕಾರಿಯನ್ನು ನೇಮಿಸಿ ಅವರ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆ ಮತ್ತು ಇ-ಮೇಲ್‌ ಐಡಿಯನ್ನು ರಾಜ್ಯಮಟ್ಟದ ನೋಡಲ್‌ ಅಧಿಕಾರಿಯಾಗಿರುವ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಕಳುಹಿಸಬೇಕು.

ಈ ತಂಡ ಕಾಲೇಜುಗಳ ಹಂತದಲ್ಲಿ ಸೋಂಕಿತರು ಕಂಡುಬಂದಲ್ಲಿ ಅಂತಹವರ ವಿವರಗಳನ್ನು ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಬೇಕು. ಕಾಲೇಜುಗಳಲ್ಲಿ ಸಾಬೂನು, ನೀರು ಮತ್ತು ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬರೂ ಅಂತರ ಕಾಯ್ದುಕೊಳ್ಳಬೇಕು. ಸೂಕ್ತ ಮಾರ್ಗದರ್ಶನ, ಸಹಾಯಕ್ಕಾಗಿ ಜಿಲ್ಲಾ ನಿಯಂತ್ರಣ ಕೊಠಡಿ ಸಹಾಯವಾಣಿ ಅಥವಾ ದಿಶಾ ಸಹಾಯವಾಣಿ 0471-255 2056 ಸಂಪರ್ಕಿಸಬಹುದು.

ಸಭೆ ಸೇರುವುದನ್ನು ಸಾಧ್ಯವಾದಷ್ಟುಮಟ್ಟಿಗೆ ಕಡಿಮೆ ಮಾಡಿ ವಿಡಿಯೋ ಕಾನ್ಫರೆನ್ಸ್‌ ಅಥವಾ ಆನ್‌ಲೈನ್‌ ಮೂಲಕ ವಿಷಯ ಹಂಚಿಕೆ ಮಾಡಿಕೊಳ್ಳಬೇಕು. ತುರ್ತು ಸಮಯದಲ್ಲಿ ಕಾರ್ಯನಿರ್ವಹಿಸುವ ಸ್ವಯಂಸೇವಕರು, ಅಧಿಕಾರಿಗಳು, ವಾಹನ ಮತ್ತು ಚಾಲಕರ ಸಂಖ್ಯೆ ವಿವರ ನೀಡುವುದು. ತಮ್ಮ ಸಂಸ್ಥೆ ವ್ಯಾಪ್ತಿಯಲ್ಲಿನ ಅತಿಥಿ ಗೃಹ, ಕಚೇರಿಗಳು, ಶಾಲೆಗಳು, ಕಾಲೇಜುಗಳಲ್ಲಿ ಸ್ನಾನದ ಕೋಣೆಗಳೊಂದಿಗೆ ಪ್ರತ್ಯೇಕ ಕೊಠಡಿಗಳಿರುವ ಕಟ್ಟಡಗಳ ವಿವರಗಳನ್ನು ಸಿದ್ಧಪಡಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ