ಆದಾಯ ತೆರಿಗೆ ಬಾಕಿ ಉಳಿಸಿಕೊಂಡವರಿಗೊಂದು ಸಂತಸದ ಸುದ್ದಿ..!

Published : Dec 26, 2020, 11:00 AM IST
ಆದಾಯ ತೆರಿಗೆ ಬಾಕಿ ಉಳಿಸಿಕೊಂಡವರಿಗೊಂದು ಸಂತಸದ ಸುದ್ದಿ..!

ಸಾರಾಂಶ

ಎಷ್ಟೇ ವರ್ಷಗಳು ಬಾಕಿ ಮೊತ್ತವಿದ್ದರೂ ಆದಾಯ ತೆರಿಗೆ ಇಲಾಖೆಗೆ ಪಾವತಿಸುವಂತೆ ವಿನಾಯಿತಿ| ಶಾಶ್ವತವಾಗಿ ಡಿಸ್ಪ್ಯೂಟ್‌ಗಳಿಗೆ ವಿನಾಯಿತಿ ನೀಡಿದ ಆದಾಯ ತೆರಿಗೆ ಇಲಾಖೆ| ಹೆಚ್ಚಿನ ಬಡ್ಡಿ ಹಾಗೂ ಫೈನ್‌ಗಳಿಗೆ ಕಂಪ್ಲೀಟ್ ವಿನಾಯಿತಿ| 

ಬೆಂಗಳೂರು(ಡಿ.26): ಬಾಕಿ ಉಳಿಸಿಕೊಂಡಿರುವ ಆದಾಯ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ಸಂತಸದ ಸುದ್ದಿಯೊಂದು ಬಂದಿದೆ. ಹೌದು, ವಿವಾದ್ ಸೇ ವಿಶ್ವಾಸ್ ಸೆಮಿನಾರ್‌ನ ಅಡಿ ಬಾಕಿದಾರರಿಗೆ ಆಫರ್‌ವೊಂದನ್ನ ನೀಡಿದೆ. 

ಬಾಕಿ ಉಳಿಸಿಕೊಂಡಿರುವ ಆದಾಯ ತೆರಿಗೆಗೆ ಯಾವುದೇ ವಿವಾದ ವಿಲ್ಲದೆ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ. ಎಷ್ಟೇ ವರ್ಷಗಳು ಬಾಕಿ ಮೊತ್ತವಿದ್ದರೂ ಆದಾಯ ತೆರಿಗೆ ಇಲಾಖೆಗೆ ಪಾವತಿಸುವಂತೆ ವಿನಾಯಿತಿ ನೀಡಲಾಗಿದೆ. ಬಾಕಿ ಪಾವತಿಸುವವರ ವಿರುದ್ಧ ಯಾವುದೇ ದೂರು ದಾಖಲಿಸುವುದಿಲ್ಲ ಎಂದು ಗೋವಾ ಹಾಗೂ ಕರ್ನಾಟಕ ಮುಖ್ಯ ಆಯುಕ್ತ ಡಿಸಿ ಪಟ್ಟಾರಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. 

ತೆರಿಗೆ ಬಾಕಿ ಉಳಿಸಿಕೊಂಡ್ರೆ ಆಸ್ತಿ ಮುಟ್ಟುಗೋಲು

ವಿವಾದ್ ಸೇ ವಿಶ್ವಾಸ್ ಸೆಮಿನಾರ್‌ನ ಅಡಿ ಹೆಚ್ಚಿನ ಬಡ್ಡಿ ಹಾಗೂ ಫೈನ್‌ಗಳಿಗೆ ಕಂಪ್ಲೀಟ್ ವಿನಾಯಿತಿ ಸಿಗಲಿದೆ. ಈ ಮೂಲಕ ಆದಾಯ ತೆರಿಗೆ ಇಲಾಖೆ ಶಾಶ್ವತವಾಗಿ ಡಿಸ್ಪ್ಯೂಟ್‌ಗಳಿಗೆ ವಿನಾಯಿತಿ ನೀಡಿದೆ.  ತೆರಿಗೆ ಪಾವತಿದಾರರು ವಿವಾದಿತ ತೆರಿಗೆ ಪಾವತಿಸುವ ಮೂಲಕ ಆದಾಯ ತೆರಿಗೆ ಇಲಾಖೆಯೊಂದಿಗೆ ತಮ್ಮ ತೆರಿಗೆ ವಿವಾದಗಳನ್ನು ಕೊನೆಗೊಳಿಸಲು ಮತ್ತು ಬಡ್ಡಿ ದಂಡವನ್ನು ಪಾವತಿಸುವುದರಿಂದ ವಿನಾಯಿತಿ ಪಡೆಯಬಹುದಾಗಿದೆ. ಕಾನೂನು ಕ್ರಮದಿಂದ ವಿನಾಯಿತಿ ಪಡೆಯಲು ಸಹಾಯ ಮಾಡಲು ವಿವಾದ ವಿವಾದ ಸೆ ವಿಶ್ವಾಸ್‌ ಯೋಜನೆಯನ್ನು ಪರಿಚಯಿಸಲಾಗಿದೆ. ಅರ್ಹ ತೆರಿಗೆ ಪಾವತಿದಾರರು www.incometaxindiafiling.gov.in ವೆಬ್‌ಸೈಟ್‌ನಲ್ಲಿ ಫಾರ್ಮ್‌ 1, ಫಾರ್ಮ್‌  2 ಆನ್‌ಲೈನ್‌ನಲ್ಲಿ ವಿವಾದ್‌ ಸೆ ವಿಶ್ವಾಸ್‌ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌
14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ