ಕಾಂಗ್ರೆಸ್‌ ನಾಯಕನ ಮೇಲೆ ಆದಾಯ ತೆರಿಗೆ ದಾಳಿ

Published : Jan 24, 2019, 10:19 AM IST
ಕಾಂಗ್ರೆಸ್‌ ನಾಯಕನ ಮೇಲೆ ಆದಾಯ ತೆರಿಗೆ ದಾಳಿ

ಸಾರಾಂಶ

ಕಾರ್ಕಳ ಕಾಂಗ್ರೆಸ್‌ ನಾಯಕನ ಮೇಲೆ ಆದಾಯ ತೆರಿಗೆ ದಾಳಿ| ಕೇರಳ ಮೂಲದ ಗಣಿ ಉದ್ಯಮಿ ಮನೆಯಲ್ಲೂ ಶೋಧ

ಉಡುಪಿ[ಜ.24]: ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ, ಪ್ರಥಮ ದರ್ಜೆ ಗುತ್ತಿಗೆದಾರ ಮುನಿಯಾಲು ಉದಯ ಕುಮಾರ್‌ ಶೆಟ್ಟಿಅವರ ವ್ಯವಹಾರ ಕಚೇರಿ ಹಾಗೂ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಬೆಂಗಳೂರಿನ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಬುಧವಾರ ಮುಂಜಾನೆ ಎರಡು ಬಾಡಿಗೆ ಇನೋವಾ ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳು ನೇರವಾಗಿ ಉದಯ ಕುಮಾರ್‌ ಶೆಟ್ಟಿಮನೆಗೆ ತೆರಳಿ ತನಿಖೆ ನಡೆಸಿದ್ದಾರೆ. ಉದಯ ಕುಮಾರ್‌ ಶೆಟ್ಟಿಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಅಕಾಂಕ್ಷಿಯಾಗಿದ್ದರು. ಟಿಕೆಟ್‌ಗಾಗಿ ಸಚಿವರೊಬ್ಬರಿಗೆ ಹಣ ನೀಡಿರುವ ಆರೋಪ ಕೂಡ ಇವರ ಮೇಲೆ ಕೇಳಿಬಂದಿತ್ತು. ಸ್ವತಃ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರೇ ಉದಯ ಕುಮಾರ್‌ ಶೆಟ್ಟಿವಿರುದ್ಧ ತಿರುಗಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಉದಯ ಕುಮಾರ್‌ ಶೆಟ್ಟಿಅವರ ಮೇಲಿನ ಐಟಿ ದಾಳಿ ತೀವ್ರ ಕುತೂಹಲ ಮೂಡಿಸಿದೆ.

ಗಣಿ ಉದ್ಯಮಿ ಮನೆ ಮೇಲೂ ದಾಳಿ:

ಗ್ರಾನೈಟ್‌ ಉದ್ಯಮದಲ್ಲಿ ಸುದ್ದಿ ಮಾಡಿರುವ ಗಣಿ ಉದ್ಯಮಿ, ಕೇರಳದ ಮೂಲದ ಸಿ.ಎಂ. ಜೋಯ್‌ ಎಂಬವರ ಕಚೇರಿ, ಕ್ವಾರಿ ಹಾಗೂ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಏತನ್ಮಧ್ಯೆ, ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಆಪ್ತರಾಗಿದ್ದ, ಗುತ್ತಿಗೆದಾರ ರಾಜೇಶ್‌ ಕಾರಂತ್‌ ಅವರ ಮನೆ, ಕಚೇರಿಗಳ ಮೇಲೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಇದು ಇದು ಖಚಿತವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌