ದೇಶದ ಪ್ರತಿ ಮೂವರಲ್ಲಿ ಒಬ್ಬರಿಗೆ ಮಧುಮೇಹ: ರಾಜ್ಯಪಾಲ ಕಳವಳ

Published : Jun 06, 2023, 05:54 AM IST
ದೇಶದ ಪ್ರತಿ ಮೂವರಲ್ಲಿ ಒಬ್ಬರಿಗೆ ಮಧುಮೇಹ: ರಾಜ್ಯಪಾಲ ಕಳವಳ

ಸಾರಾಂಶ

ದೇಶದ ಪ್ರತಿ ಮೂವರಲ್ಲಿ ಒಬ್ಬರು ಮಧುಮೇಹ ರೋಗಕ್ಕೆ ತುತ್ತಾಗುತ್ತಿದ್ದು, ವಿಶೇಷವಾಗಿ ಯುವ ಪೀಳಿಗೆಯಲ್ಲೂ ಮಧುಮೇಹ ಹೆಚ್ಚಾಗುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ.6) ದೇಶದ ಪ್ರತಿ ಮೂವರಲ್ಲಿ ಒಬ್ಬರು ಮಧುಮೇಹ ರೋಗಕ್ಕೆ ತುತ್ತಾಗುತ್ತಿದ್ದು, ವಿಶೇಷವಾಗಿ ಯುವ ಪೀಳಿಗೆಯಲ್ಲೂ ಮಧುಮೇಹ ಹೆಚ್ಚಾಗುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌(Governor Thawar Chand Gehlot) ಕಳವಳ ವ್ಯಕ್ತಪಡಿಸಿದ್ದಾರೆ.

ಶ್ರದ್ಧಾ ಐ ಕೇರ್‌ ಟ್ರಸ್ಟ್‌ ಮತ್ತು ಡಯಾಬಿಟಿಸ್‌ ಕ್ಲಬ್‌ ನಗರದ ತಿಮ್ಮಯ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಬೆಂಗಳೂರು ಮಧುಮೇಹ ಮತ್ತು ಕಣ್ಣಿನ ಆಸ್ಪತ್ರೆ’ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಮಧುಮೇಹದಿಂದ ಬಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಧುಮೇಹ ಕಣ್ಣು ಮತ್ತು ಕಿಡ್ನಿಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಇದನ್ನು ನಿಯಂತ್ರಿಸುವುದು ಇಂದಿನ ಪರಿಸ್ಥಿತಿಗೆ ಅತ್ಯಗತ್ಯ. ಯುವಜನತೆ ಮಧುಮೇಹ ತಡೆಯಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಮ್ಯಾಂಗೋ ಸೀಸನ್ ಶುರು, ಡಯಾಬಿಟಿಸ್ ಇರೋರು ಮಾವಿನ ಹಣ್ಣು ತಿನ್ಬೋದಾ?

ಶ್ರದ್ಧಾ ಐ ಕೇರ್‌ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿಡಾ ಗಣೇಶ್‌ ಮಾತನಾಡಿ, 2005ರಿಂದ 3500 ಆರೋಗ್ಯ ಶಿಬಿರಗಳ ಮೂಲಕ ಸುಮಾರು 4.5 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸುಮಾರು 80 ಸಾವಿರಕ್ಕೂ ಹೆಚ್ಚು ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

ಟ್ರಸ್ಟ್‌ನ ಟ್ರಸ್ಟಿಯಾದ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಯಾರೊಬ್ಬರೂ ಮಧುಮೇಹದ ದುಷ್ಪರಿಣಾಮಗಳಿಗೆ ತುತ್ತಾಗಬಾರದು. ಮಧುಮೇಹ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯವಿರುವ ಕಡೆಯಲ್ಲಿ ಚಿಕಿತ್ಸೆ ಕಲ್ಪಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಈ ಸಮಸ್ಯೆ ಇದೆ ಅಂದ್ರೆ ಬಾಳೆಹಣ್ಣನ್ನು ತಿನ್ನಲೇ ಬಾರದು!

ಪೊಲೀಸ್‌ ಆಯುಕ್ತ ಬಿ.ದಯಾನಂದ, ಶ್ರದ್ಧಾ ಐ ಕೇರ್‌ ಟ್ರಸ್ಟ್‌ನ ಸಂಸ್ಥಾಪಕ ಟ್ರಸ್ಟಿಡಾ ಸುಮನ್‌, ಟ್ರಸ್ಟಿಗಳಾದ ದಿಲೀಪ್‌ ಸುರಾನಾ, ಕೆ.ಜಿ.ರಾಘವನ್‌ ಮತ್ತು ಡಯಾಬಿಟೀಸ್‌ ಕ್ಲಬ್‌ ಅಧ್ಯಕ್ಷ ಡಾ

ಅನಿಲ್‌ ಕುಮಾರ್‌, ಕಾರ್ಯದರ್ಶಿ ಡಾ ಕಾರ್ತಿಕ್‌ ಮುನಿಚೂಡಪ್ಪ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್