ಗಡಿ ಜಿಲ್ಲೆಗಳಲ್ಲಿ ಹೆಚ್ಚಿದ ಕೊರೋನಾ ಕೇಸ್‌: ಹೆಚ್ಚಿದ ಟೆನ್ಷನ್‌..!

Kannadaprabha News   | Asianet News
Published : Aug 12, 2021, 07:40 AM IST
ಗಡಿ ಜಿಲ್ಲೆಗಳಲ್ಲಿ ಹೆಚ್ಚಿದ ಕೊರೋನಾ ಕೇಸ್‌: ಹೆಚ್ಚಿದ ಟೆನ್ಷನ್‌..!

ಸಾರಾಂಶ

*  ಬುಧವಾರ 1826 ಕೇಸು, 33 ಜನರ ಸಾವು *  13 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿಗೆ ಇಳಿಕೆ *  ರಾಜ್ಯದಲ್ಲಿ ಒಟ್ಟು 36,881 ಮಂದಿ ಕೊರೋನಾಗೆ ಬಲಿ  

ಬೆಂಗಳೂರು(ಆ.12): ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಬುಧವಾರ 1,826 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 33 ಮಂದಿ ಸಾವನ್ನಪ್ಪಿದ್ದಾರೆ.

ಕೇರಳಗೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕು ಏರುಗತಿಯಲ್ಲೇ ಸಾಗಿದೆ. ಬುಧವಾರ 422 ಮಂದಿಗೆ ಸೋಂಕು ತಗುಲಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 377 ಮಂದಿಗೆ ಸೋಂಕು ಉಂಟಾಗಿದ್ದು 5 ಮಂದಿ ಬಲಿಯಾಗಿದ್ದಾರೆ. ಬುಧವಾರದ 1,826 ಪ್ರಕರಣಗಳ ಮೂಲಕ ದಿನದ ಸೋಂಕು ಪ್ರಮಾಣ ದರ ಮೂರು ದಿನಗಳ ನಂತರ ಮತ್ತೆ (ಆ.8ರಂದು ಶೇ.1.09) ಶೇ.1.09ಕ್ಕೆ ಏರಿಕೆಯಾಗಿದೆ.

ಗಡಿ ಭಾಗದಲ್ಲಿ ಸೋಂಕು ಹೆಚ್ಚಳ: 

ಗಡಿ ಜಿಲ್ಲೆಗಳಲ್ಲಿ ಮತ್ತೆ ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ದಕ್ಷಿಣ ಕನ್ನಡದಲ್ಲಿ 422, ಉಡುಪಿಯಲ್ಲಿ 130, ಮೈಸೂರಿನಲ್ಲಿ 118 ಪ್ರಕರಣಗಳು ವರದಿಯಾಗಿವೆ. ಇದಲ್ಲದೆ ಬೆಂಗಳೂರು ನಗರದಲ್ಲಿ 377,  ಹಾಸನದಲ್ಲಿ 175 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ 14 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಎರಡಂಕಿಗೆ ಹಾಗೂ 9 ಜಿಲ್ಲೆಗಳಲ್ಲಿ ಒಂದಂಕಿಗೆ ಇಳಿಕೆಯಾಗಿದೆ. ಗದಗ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಶೂನ್ಯ ವರದಿಯಾಗಿದೆ.

ಕೊರೋನಾ: ದಕ್ಷಿಣ ಕನ್ನಡ ರಾಜ್ಯದಲ್ಲೇ ನಂ.1

ಒಟ್ಟು ಸೋಂಕಿತರ ಸಂಖ್ಯೆ 29.22 ಲಕ್ಷ ದಾಟಿದಂತಾಗಿದೆ. ಒಂದೇ ದಿನ 1,618 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಒಟ್ಟು ಸಂಖ್ಯೆ 28.63 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,676ರಿಂದ 22,851 ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ 5 ಮಂದಿ ಸೇರಿದಂತೆ ಸೋಂಕಿತರಲ್ಲಿ 33 ಮಂದಿ ಸಾವನ್ನಪ್ಪಿದ್ದಾರೆ. 13 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದ್ದು, 17 ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಶೂನ್ಯ ಎಂದು ವರದಿಯಾಗಿದೆ. ಇದರಿಂದ ದಿನದ ಮರಣ ಪ್ರಮಾಣ ದರ ಶೇ.1.80 ತಲುಪಿದ್ದು, ಈವರೆಗೂ ಒಟ್ಟು 36,881 ಮಂದಿ ಸಾವನ್ನಪ್ಪಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!