
ಹುಬ್ಬಳ್ಳಿ (ಫೆ.8): ಭಾರತ ಹಾಗೂ ಅಮೆರಿಕ ಒಪ್ಪಂದದಿಂದ ಯಾರಿಗೂ ಲಾಭವಿಲ್ಲ. ಈ ಮಧ್ಯೆಯೂ ಅಮೆರಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಒಪ್ಪುತ್ತಿದ್ದಾರೆ. ಆ ಮೂಲಕ ಅಮೆರಿಕ ಹೇಳಿದಂತೆ ನಾವು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಮೆರಿಕದಿಂದ ಭಾರತಕ್ಕೆ ಬರುವ ಯಾವ ವಸ್ತುಗಳಿಗೂ ಟ್ಯಾಕ್ಸ್ ಇಲ್ಲ. ರೈತರ ಉತ್ಪನ್ನಗಳಿಗೆ ಜೀರೋ ಟ್ಯಾಕ್ಸ್ ಹಾಕುತ್ತಿದ್ದು, ರೈತರಿಗೆ ಇದರಿಂದ ತೊಂದರೆ ಆಗಲಿದೆ. ಇಂತಹ ವಿಚಾರಗಳ ಬಗ್ಗೆ ಪರಾಮರ್ಶೆ ಮಾಡಬೇಕಾದ ಬಿಜೆಪಿಗರು, ಪ್ರಧಾನಿಗಳ ನಡೆ ವಿರುದ್ಧ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: BIFFes Row: ಪ್ಯಾಲೆಸ್ಟೈನ್ ಸಿನಿಮಾ ಪ್ರದರ್ಶನಕ್ಕೆ ಸಚಿವ ಲಾಡ್ ಸಾಥ್; ಪ್ರಕಾಶ್ ರಾಜ್ ಪರ ಬ್ಯಾಟಿಂಗ್!
ಮಾಜಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಪುಸ್ತಕಕ್ಕೆ ಏಕೆ ಪರವಾನಗಿ ನೀಡಲಾಗುತ್ತಿಲ್ಲ. ಬಿಜೆಪಿಯವರು ಮುಂದಿನ ದಿನಗಳಲ್ಲಿ ನರವಣೆ ಅವರನ್ನು ದೇಶದ್ರೋಹಿ ಎಂದು ಕರೆಯುವುದರಲ್ಲಿ ಸಂದೇಹವಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ