ಇಂಡಿಯನ್ ಕೋಸ್ಟ್‌ಗಾರ್ಡ್ ಇಂದು ಸಾಕಷ್ಟು ಪ್ರಬಲವಾಗಿ ಬೆಳೆದಿದೆ;: ಮನೋಜ ಬಾಡಕರ

Published : Sep 14, 2023, 02:22 PM IST
 ಇಂಡಿಯನ್ ಕೋಸ್ಟ್‌ಗಾರ್ಡ್ ಇಂದು ಸಾಕಷ್ಟು ಪ್ರಬಲವಾಗಿ ಬೆಳೆದಿದೆ;: ಮನೋಜ ಬಾಡಕರ

ಸಾರಾಂಶ

ಇಂಡಿಯನ್ ಕೋಸ್ಟ್‌ಗಾರ್ಡ್ ಸಾಕಷ್ಟು ಪ್ರಬಲವಾಗಿ ಬೆಳೆದಿದೆ. ಸರ್ಕಾರ ಸಾಕಷ್ಟು ಬಲ ನೀಡಿದೆ. ಈಗಾಗಲೇ ಆಧುನಿಕ ತಂತ್ರಜ್ಞಾನ ಇರುವ ೮ ಹೆಲಿಕಾಪ್ಟರ್ ಇದ್ದು, ಇನ್ನೂ ೮ ಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಂಡಿಯನ್ ಕೋಸ್ಟ್‌ಗಾರ್ಡ್ ಇನ್‌ಸ್ಪೆಕ್ಟರ್ ಆಫ್ ಜನರಲ್ ಮನೋಜ ಬಾಡಕರ ಹೇಳಿದರು.

ಕಾರವಾರ (ಸೆ.14) :  ಇಂಡಿಯನ್ ಕೋಸ್ಟ್‌ಗಾರ್ಡ್ ಸಾಕಷ್ಟು ಪ್ರಬಲವಾಗಿ ಬೆಳೆದಿದೆ. ಸರ್ಕಾರ ಸಾಕಷ್ಟು ಬಲ ನೀಡಿದೆ. ಈಗಾಗಲೇ ಆಧುನಿಕ ತಂತ್ರಜ್ಞಾನ ಇರುವ ೮ ಹೆಲಿಕಾಪ್ಟರ್ ಇದ್ದು, ಇನ್ನೂ ೮ ಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಂಡಿಯನ್ ಕೋಸ್ಟ್‌ಗಾರ್ಡ್ ಇನ್‌ಸ್ಪೆಕ್ಟರ್ ಆಫ್ ಜನರಲ್ ಮನೋಜ ಬಾಡಕರ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಆಧುನಿಕ ಹೆಲಿಕಾಪ್ಟರ್‌ಗಳು ಕೋಸ್ಟ್‌ಗಾರ್ಡ್ ಬಳಿಯಿದ್ದು, ಕಾರ್ಯಾಚರಣೆಗೆ ಅನುಕೂಲವಾಗುತ್ತಿವೆ. ಬೇರೆ ಬೇರೆ ರಕ್ಷಣಾ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಕೆಲವು ದಿನಗಳ ಹಿಂದೆ ಚೀನಾದ ಶಿಪ್ ಒಂದರಲ್ಲಿ ತೊಂದರೆ ಆದಾಗ ಅಲ್ಲಿಗೆ ತೆರಳಿ ತಮ್ಮ ತಂಡ ರಕ್ಷಣಾ ಕಾರ್ಯ ಮಾಡಿದೆ ಎಂದರು.

 

ಮೈನವಿರೇಳಿಸುವ ಕೋಸ್ಟ್ ಗಾರ್ಡ್ ಅಣಕು ಕಾರ್ಯಾಚರಣೆ: ಸಮುದ್ರದಲ್ಲಿ ಒಂದು ದಿನ ವಿಶೇಷ!

ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ಕೋಸ್ಟ್‌ಗಾರ್ಡ್ ಸ್ವಂತ ಕಚೇರಿ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಹಂತದಲ್ಲಿದ್ದು, ಎರಡರಿಂದ ಎರಡುವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ೭೫೦೦ ಕಿಮೀ ದೂರದ ಕರಾವಳಿಯಲ್ಲಿ ಕೋಸ್ಟಲ್ ಸೆಕ್ಯೂರಿಟಿ ನೆಟ್ವರ್ಕ್(ಸಿಎಸ್‌ಎನ್) ಅಳವಡಿಕೆ ಮಾಡಲಾಗುತ್ತಿದೆ. ರಡಾರ್, ಕ್ಯಾಮೆರಾ ಮೊದಲಾದ ಸೌಲಭ್ಯ ಇರುತ್ತದೆ. ಇದು ಅನುಷ್ಠಾನಗೊಳ್ಳುವುದರಿಂದ ಶಿಪ್, ಹಡಗುಗಳ ಚಲನ-ವಲನ ಬಗ್ಗೆ ನಿಗಾ ಇಡಲು ಅನುಕೂಲವಾಗಲಿದೆ ಎಂದು ವಿವರಿಸಿದರು.

ಕಳೆದ ೩೭ ವರ್ಷದಿಂದ ದೇಶ ಸೇವೆಯಲ್ಲಿ ತೊಡಗಿದ್ದು, ಈ ತಿಂಗಳು ನಿವೃತ್ತಿಯಾಗಲಿದ್ದೇನೆ ಎಂದು ಇಂಡಿಯನ್ ಕೋಸ್ಟ್‌ಗಾರ್ಡ್‌ನ ಇನ್‌ಸ್ಪೆಕ್ಟರ್‌ ಆಫ್ ಜನರಲ್ ಮನೋಜ ಬಾಡಕರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಮೂಲತಃ ಇಲ್ಲಿಯವನೇ ಆಗಿದ್ದು, ಕಾರವಾರದಲ್ಲಿ ಉಳಿದುಕೊಂಡು ಜನರ ಸೇವೆ ಮಾಡುತ್ತೇನೆ. ಯಾವ ರೀತಿ ಜನರ ಸೇವೆಯಲ್ಲಿ ತೊಡಗಬೇಕು ಎನ್ನುವುದನ್ನು ಸೇವಾ ನಿವೃತ್ತಿಯ ಬಳಿಕ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

ಕೋಸ್ಟ್‌ ಗಾರ್ಡ್‌ ಯೋಜನೆ ಸ್ಥಗಿತ: ರೇಂಜ್‌ ಕಮಾಂಡರ್‌ ಬಾಡ್ಕರ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!