Breaking: ಕನ್ನಡದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ

Published : Dec 16, 2024, 07:29 PM IST
Breaking: ಕನ್ನಡದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ

ಸಾರಾಂಶ

ಪದ್ಮಶ್ರೀ ಪುರಸ್ಕೃತೆ, ಪರಿಸರ ಪ್ರೇಮಿ ತುಳಸಿ ಗೌಡ (86) ವಯೋಸಹಜ ಕಾಯಿಲೆಯಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ತಮ್ಮ ಜೀವಿತಾವಧಿಯಲ್ಲಿ 30,000ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು.

ಉತ್ತರಕನ್ನಡ (ಡಿ.16): ಭಾರತದಲ್ಲಿ ಸಾಲು ಮರದ ತಿಮ್ಮಕ್ಕ ಅವರಂತೆಯೇ ಪರಿಸರ ಪ್ರೇಮಿ ಎಂದೇ ಖ್ಯಾತರಾಗಿರುವ ಕನ್ನಡ ನಾಡಿನ ತುಳಸಿ ಗೌಡ ಅವರು ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.

ಭಾರತದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ (86) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಂಜೆ ವೇಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು  ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು.

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್ - ಪೊಲೀಸರ ಬಲೆಗೆ ಬಿದ್ದ ಮೂವರು!