
ನವದೆಹಲಿ: ಭಾರತೀಯ ರೈಲ್ವೆ ಕಾಯ್ದಿರಿಸುವ ಟಿಕೆಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಕಾಯ್ದಿರಿಸಿದ ಟಿಕೆಟ್ ಹೊಂದಿರುವ ಪ್ರಯಾಣಿಕರು ತಮ್ಮ ಟಿಕೆಟ್ನಲ್ಲಿ ಉಲ್ಲೇಖಿಸಿರುವ ನಿಗದಿತ ನಿಲ್ದಾಣದಲ್ಲಿ ರೈಲು ಏರದಿದ್ದಲ್ಲಿ, ಅವರ ಕಾಯ್ದಿರಿಸಿದ ಸೀಟ್ ಸ್ವಯಂಚಾಲಿತವಾಗಿ ರದ್ದುಗೊಳ್ಳಲಿದೆ.
ಈ ಹೊಸ ನಿಯಮದ ಅನುಷ್ಠಾನಕ್ಕಾಗಿ ರೈಲ್ವೆ ಇಲಾಖೆ ಟಿಕೆಟ್ ಪರಿಶೀಲಕರಿಗೆ (ಟಿಟಿಇ) ಹೊಸ ಹ್ಯಾಂಡ್ ಹೆಲ್ಡ್ ಟರ್ಮಿನಲ್ (HHT) ಟ್ಯಾಬ್ಲೆಟ್ಗಳು ಒದಗಿಸಿದೆ. ಕಾಯ್ದಿರಿಸಿದ ಪ್ರಯಾಣಿಕರು ನಿಗದಿತ ನಿಲ್ದಾಣದಲ್ಲಿ ರೈಲು ಏರದಿದ್ದರೆ, ಟಿಟಿಇ ತಕ್ಷಣವೇ ಆ ಮಾಹಿತಿಯನ್ನು ಈ ಸಾಧನದಲ್ಲಿ ದಾಖಲಿಸುತ್ತಾರೆ. ಈ ದಾಖಲೆಯ ಆಧಾರದ ಮೇಲೆ, ಆ ಸೀಟ್ ಅನ್ನು ತಕ್ಷಣವೇ ಕಾಯುವಿಕೆ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಹಂಚಲಾಗುತ್ತದೆ.
ಮತ್ತೊಂದೆಡೆ, ಅವರ ಕಾಯ್ದಿರಿಸಿದ ಆಸನವನ್ನು ಮತ್ತೊಬ್ಬರಿಗೆ ನೀಡಲಾಗಿದೆ ಎಂಬ ಮಾಹಿತಿ ಮೂಲ ಪ್ರಯಾಣಿಕರಿಗೆ ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ. ಈ ಹಿಂದೆ, ಕಾಯ್ದಿರಿಸಿದ ಪ್ರಯಾಣಿಕರು ಏರದಿದ್ದರೂ ಆ ಸೀಟ್ ಅನ್ನು ಮುಂದಿನ ಎರಡು ನಿಲ್ದಾಣಗಳವರೆಗೆ ಖಾಲಿ ಬಿಡಲಾಗುತ್ತಿತ್ತು. ಹೊಸ ನಿಯಮದಿಂದಾಗಿ ಸೀಟ್ ವ್ಯರ್ಥವಾಗುವುದನ್ನು ತಡೆಯುವ ಜೊತೆಗೆ ಕಾಯುವಿಕೆ ಪಟ್ಟಿಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ South Western Railway ಬೆಂಗಳೂರು ವಿಭಾಗವು, ಮಂಗಳವಾರದಿಂದ ನಾಲ್ಕು ಜೋಡಿ ಪ್ರಮುಖ ರೈಲುಗಳಿಗೆ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ನಿಲುಗಡೆ ವ್ಯವಸ್ಥೆ ಜಾರಿಗೊಳಿಸಿದೆ.
ನಾಯಂಡಹಳ್ಳಿ ಪ್ರದೇಶದ ನಿವಾಸಿಗಳಿಗೆ ಬೆಂಗಳೂರು ನಗರ ಹಾಗೂ ಮೈಸೂರು ಕಡೆಗೆ ಸಂಚರಿಸಲು ಈ ಹೊಸ ನಿಲುಗಡೆ ವ್ಯವಸ್ಥೆ ಬಹಳ ಸಹಕಾರಿಯಾಗಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ. ಈ ಕ್ರಮದಿಂದ ಪ್ರಯಾಣಿಕರ ಸಮಯ ಉಳಿತಾಯವಾಗುವ ಜೊತೆಗೆ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿತ್ವವೂ ಹೆಚ್ಚಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ