ಲಾಕ್‌ಡೌನ್: ಮೈಸೂರು ಝೂನ ಪ್ರಾಣಿಗಳ ರಕ್ಷಣೆಗೆ ಅಮೆರಿಕಾದಿಂದ ಬಂತು ಹಣ..!

Published : May 02, 2020, 07:30 PM ISTUpdated : May 02, 2020, 07:41 PM IST
ಲಾಕ್‌ಡೌನ್: ಮೈಸೂರು ಝೂನ ಪ್ರಾಣಿಗಳ ರಕ್ಷಣೆಗೆ ಅಮೆರಿಕಾದಿಂದ ಬಂತು ಹಣ..!

ಸಾರಾಂಶ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಜನರಿಗೆ ಮಾತ್ರವಲ್ಲ ಜಿಲ್ಲೆಯ ಜಯಚಾಮರಾಜೇಂದ್ರ ಮೃಗಾಲಯದಲ್ಲಿರುವ ಪ್ರಾಣಿಗಳ ರಕ್ಷಣೆಗೆ ಒತ್ತು ನೀಡಿದ್ದಾರೆ.

ಬೆಂಗಳೂರು, (ಮೇ.02): ಸಚಿವ ಎಸ್‌.ಟಿ.ಸೋಮಶೇಖರ್ ಅವರ ಮನವಿಗೆ ಸ್ಪಂದಿಸಿದ ಅಮೆರಿಕಾದ ಫಿನಿಕ್ಸ್‌ನಗರದಲ್ಲಿರುವ ಭಾರತೀಯರೊಬ್ಬರು ಮೈಸೂರು ಮೃಗಾಲಯಕ್ಕೆ ದೇಣಿಗೆ ನೀಡಿದ್ದಾರೆ.

 ಸಚಿವರ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಚಿಂತಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮೈಸೂರು ಮೃಗಾಲಯ ಸಂಕಷ್ಟಕ್ಕೆ ನೆರವಾದ ಖಾಸಗಿ ಕಾಲೇಜಿನ ಪ್ರಾಂಶುಪಾಲೆ

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಅಮೆರಿಕದ ಫೀನಿಕ್ಸ್ ನ ಜ್ಯೋತಿ ವಿಕಾಸ್ ಎಂಬುವರು ತಮ್ಮ ಮಗಳ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿದ್ದಾರೆ.

ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಅನ್ನಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿ .ನೆರವಾಗಿದ್ದಾರೆ.

ಮೊದಲ ಬಾರಿ ಜನರ ನೆರವು ಕೇಳಿದ ಮೈಸೂರು ಮೃಗಾಲಯ..!

ಈ ಬಗ್ಗೆ ಪ್ರತಿಕ್ರಿಯಿಸಿರುವ ಜ್ಯೋತಿ ವಿಕಾಸ್ ಅವರು, "ಪ್ರಿಶಾ ನಮ್ಮ ಒಂದು ವರ್ಷದ ಮಗಳಾಗಿದ್ದು, ಆಕೆಯ ಹೆಸರಿನಲ್ಲಿ 2 ತಿಂಗಳ ಅವಧಿಗೆ ಆನೆಯೊಂದನ್ನು ದತ್ತು ತೆಗೆದುಕೊಂಡಿದ್ದೇವೆ. ಸಚಿವರು ಮಾಡಿದ ಮನವಿಯನ್ನು ಮಾಧ್ಯಮಗಳ ಮೂಲಕ ಗಮನಿಸಿ ದತ್ತು ತೆಗೆದುಕೊಳ್ಳುವ ನಿರ್ಧಾರ ಮಾಡಿದೆವು. ಜೊತೆಗೆ ಇಲ್ಲಿನ ದಾನಿಗಳಿಂದ ಪ್ರಾಣಿಗಳಿಗೆ ಸಹಾಯಧನವನ್ನು ಸಂಗ್ರಹಿಸಲು ನಮ್ಮ ಬಳಗ ನಿರ್ಧರಿಸಿದೆ ಎಂದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ಜನರಿಂದ ಸಹಾಯ
, ಸಚಿವ ಎಸ್‌.ಟಿ.ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನಾಂಕ 02-05-2020ರವರೆಗೆ ಸಂಗ್ರಹಿಸಿದ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ರವರಿಗೆ ಹಸ್ತಾಂತರ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೋಮಶೇಖರ್, ಆಹಾರ ಸಚಿವರಾದ ಗೋಪಾಲಯ್ಯ ಅವರಿಗೆ ಮೈಸೂರು ಮೃಗಾಲಯದ ಸ್ಥಿತಿಗತಿ ಬಗ್ಗೆ ವಿವರಣೆ ನೀಡಿ ಸಹಾಯ ಮಾಡುವಂತೆ ಕೋರಿದೆ, ಅವರು ತಕ್ಷಣ ಸ್ಪಂದಿಸಿ 8 ಲಕ್ಷ ರೂಪಾಯಿ ದೇಣಿಗೆ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ವೈಯುಕ್ತಿಕವಾಗಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಗೂ ಸರ್ಕಾರದ ವತಿಯಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!