ಸಬ್ಸಿಡಿ ಯೋಜನೆ ಬದಲಿಗೆ ದುಡಿದು ತಿನ್ನುವಂತೆ ಮಾಡಿ: ಹೈಕೋರ್ಟ್

Published : Dec 16, 2024, 10:17 AM IST
ಸಬ್ಸಿಡಿ ಯೋಜನೆ ಬದಲಿಗೆ ದುಡಿದು ತಿನ್ನುವಂತೆ ಮಾಡಿ: ಹೈಕೋರ್ಟ್

ಸಾರಾಂಶ

ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕ ವಾಗಲಿದೆ. ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡದಿದ್ದರೆ ದೇಶ ಆರ್ಥಿಕವಾಗಿ ಸದೃಢವಾಗದು. 

• ವೆಂಕಟೇಶ್ ಕಲಿಪಿ

ಬೆಂಗಳೂರು (ಡಿ.16): ಸಬ್ಸಿಡಿ ಯೋಜನೆ ದೇಶದ ಬೆಳವಣಿಗೆಗೆ ಮಾರಕವಾಗಲಿದೆ. ಜನರು ಸ್ವತಃ ದುಡಿದು ತಿನ್ನುವ ವ್ಯವಸ್ಥೆ ಜಾರಿ ಮಾಡದಿದ್ದರೆ ದೇಶ ಆರ್ಥಿಕವಾಗಿ ಸದೃಢವಾಗದು. ಸರ್ಕಾರವು ಬಡವರ ಏಳಿಗೆಗಾಗಿ ಸದುದ್ದೇಶದಿಂದ ಸಹಾಯ  ಧನದ ಯೋಜನೆಗಳನ್ನು ಪರಿಚಯಿಸಿದೆ. ಆದರೆ ಅವುಗಳ ದುರ್ಬಳಕೆ ಪ್ರಮಾಣ ಹೆಚ್ಚಾಗಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಬೇಸರ ವ್ಯಕ್ತಪಡಿಸಿದೆ. ಬಿಪಿಎಲ್ ಕಾರ್ಡುದಾರರಿಗೆ ವಿತರಿಸಬೇಕಿದ್ದ ನೀಲಿ ಸೀಮೆ ಎಣ್ಣೆಯನ್ನು ಅಕ್ರಮ ವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಲಾಗಿತ್ತು.  ತಮ್ಮನ್ನು ದೋಷಿ ಎಂದು ಘೋಷಿಸಿ 5ತಿಂಗಳ ಜೈಲು ಶಿಕ್ಷೆ ವಿಧಿಸಿದ್ದ ಅಧೀನ ನ್ಯಾಯಾಲಯ ಆದೇಶ ರದ್ದು ಕೋರಿ ಮೈಸೂರಿನ ಸಯ್ಯದ್ ಗೌಸ್ ಖಾನ್ (62) ಅದಿಲ್ ಖಾನ್ ಹೈಕೋರ್ಟ್‌ಗೆ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಕೃತ್ಯದ ಬಗ್ಗೆ ತೀವ್ರವಾಗಿ ಆಕ್ಷೇಪಿಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ, ಬಡವರ ಅನು ಕೂಲಕ್ಕೆ ಸರ್ಕಾರ ನೀಡುವ ಸಬ್ಸಿಡಿ ಯೋಜನೆಗಳು ದುರುಪಯೋಗವಾಗುತ್ತಿದೆ. ಇದರಿಂದ ಇಂದು ದೇಶ ಎಂತಹ ಸ್ಥಿತಿಗೆ ತಲುಪಿದೆ ಎಂದು ಯೋಚಿ ಸಿದರೆ ನೋವು ಉಂಟಾಗುತ್ತದೆ. ಸರ್ಕಾರವು ಬಡವರಿಗೆ ನೆರವಾಗಲು ಸಬ್ಸಿಡಿ ಯೋಜನೆ ರೂಪಿಸಿದರೆ ಸಾಲದು; ಅವುಗಳ ದುರು ಪಯೋಗವನ್ನು ಸಹ ತಡೆಯಬೇಕು ಎಂದರು. ಅಲ್ಲದೆ, ಅರ್ಜಿದಾರರಿಗೆ ಕ್ಷಮಾದಾನ ನೀಡಬೇ ಕೆಂಬ ಅವರ ಪರ ವಕೀಲರ ಮನವಿಯನ್ನು ಮೊದಲಿಗೆ ಒಪ್ಪದ ನ್ಯಾಯಮೂರ್ತಿಗಳು, ಇದು ಸಾರ್ವಜನಿಕ ಅಗತ್ಯ ವಸ್ತುಗಳ ನಿಯಮಗಳಡಿ ದಾಖಲಾಗಿರುವ ಪ್ರಕರಣ, ಆರೋಪಿಗಳನ್ನು ಸುಮ್ಮನೆ ಬಿಡಲಾಗದು. ಒಂದು ವೇಳೆ ಸಮ್ಮನೆ ಬಿಟ್ಟರೆ ಈ ಆರೋಪಿಗಳು ಸೇರಿದಂತೆ ಇದೇ ಅಕ್ರಮದಲ್ಲಿ ಪಾಲ್ಗೊಳ್ಳುವ ಇತರರು ಪಾಠ ಕಲಿಯುವುದಿಲ್ಲ ಎಂದರು. 

ಬಿ.ಎಸ್‌.ಯಡಿಯೂರಪ್ಪ ಉತ್ಸವಕ್ಕೆ ಬಿ.ವೈ.ವಿಜಯೇಂದ್ರ ಆಕ್ಷೇಪ

ಜೈಲು ಯಮ ಧರ್ಮರಾಯನ ಶಾಖೆ: ನಂತರ ಅರ್ಜಿದಾರರಿಗೆ ವಯಸ್ಸಾಗಿರುವುದನ್ನು ಪರಿಗಣಿಸಿ ಶಿಕ್ಷೆ ವಿಧಿಸಬೇಕು ಎಂಬ ನಿರ್ಧಾರವನ್ನು ಸಡಿಲ ಗೊಳಿಸಿದ ನ್ಯಾಯಮೂರ್ತಿಗಳು, ಈ ದೋಷಿ ಗಳಿಗೆ ವಯಸ್ಸಾಗಿದೆ. ನಮ್ಮ ಜೈಲಿನ ವ್ಯವಸ್ಥೆ ದೇವರಿಗೆ ಮಾತ್ರ ಇಷ್ಟವಾಗಬೇಕು. ಸರ್ಕಾರಿ ಆಸ್ಪತ್ರೆ, ಪೊಲೀಸ್ ಠಾಣೆ ಹಾಗೂ ಜೈಲುಗಳು ಯಮಧರ್ಮರಾಯನ ಶಾಖೆಗಳಿದ್ದಂತೆ. ಈ ವಯಸ್ಸಿನಲ್ಲಿ ಆರೋಪಿಗಳನ್ನು ಜೈಲಿಗೆ ಕಳುಹಿಸಿ, ನರಳುವಂತೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಶಿಕ್ಷೆ ಮಾರ್ಪಡಿಸಿ, ದಂಡ ಹೆಚ್ಚಿಸಿದರೆ ಸೂಕ್ತವಾಗುತ್ತದೆ ಎಂದು ತೀರ್ಮಾನಿಸಿದರು.ಅಂತಿಮ ವಾಗಿ ಆರೋಪಿ ಗಳಿಗೆ ತಲಾ 25 ಸಾವಿರ ರು. ದಂಡ ವಿಧಿಸಿದ ನ್ಯಾಯ ಮೂರ್ತಿಗಳು, ದಂಡ ಮೊತ್ತವನ್ನು 2025ರ ಜ.10 ರೊಳಗೆ ಪಾವತಿಸಬೇಕು. ತಪ್ಪಿದರೆ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತಾಕೀತು ಮಾಡಿದೆ.

ಪ್ರಕರಣವೇನು?: 2009ರ ಬೆಳಗ್ಗೆ 10.30ಕ್ಕೆ ಮೈಸೂರಿನ ಎಂಎಚ್ ರಸ್ತೆಯಲ್ಲಿರುವ ಮಿಷನ್ ಆಸ್ಪತ್ರೆಯ ತಡೆಗೋಡೆ ಹಿಂಭಾಗದಲ್ಲಿ ರೇಷನ್ ಕಾರ್ಡುದಾರರಿಗೆ ಸರ್ಕಾರವು ಸರಬರಾಜು ಮಾಡಿದ್ದ ಎರಡು ಬ್ಯಾರಲ್ ನೀಲಿ ಸೀಮೆ ಎಣ್ಣೆಯನ್ನು ಡೀಸೆಲ್ ಟ್ಯಾಂಕರ್ ಲಾರಿಗೆ ತುಂಬುವ ಮೂಲಕ ಖಾಸಗಿಯವರಿಗೆ ಅಕ್ರಮ ಮಾರಾಟ ಮಾಡಲು ಸಯ್ಯದ್ ಗೌಸ್ ಖಾನ್ ಮತ್ತು ಅದಿಲ್ ಖಾನ್ ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಮಂಡಿ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಹಾಗೆಯೇ, 70 ಹಾಗೂ 60 ಲೀಟರ್ ನೀಲಿ ಸೀಮೆ ಎಣ್ಣೆಯಿದ್ದ ಎರಡು ಬ್ಯಾರೆಲ್‌ಗಳನ್ನು ಜಪ್ತಿ ಮಾಡಿದ್ದರು.

ಪಂಚಮಸಾಲಿಗೆ 2ಎ ಮೀಸಲಾತಿ ಕೇಳಿಯೇ ಇಲ್ಲ: ಶಾಸಕ ಯತ್ನಾಳ್‌

ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲೆಯ 1ನೇ ಪ್ರಧಾನ ಸಿವಿಲ್ ಮತ್ತು ಜೆಎಂ ಎಫ್‌ಸಿ ನ್ಯಾಯಾಲಯ, ಸೀಮೆ ಎಣ ಆರೋಪಿ ಗಳನ್ನು ದೋಷಿಗಳೆಂದು ತೀರ್ಮಾನಿಸಿ ತಲಾ ಐದು ತಿಂಗಳ ಸಾಧಾರಣ ಜೈಲು ಶಿಕ್ಷೆ ಮತ್ತು ಸಾವಿರ ರು. ದಂಡ ವಿಧಿಸಿ 2012ರ ನ.16ರಂದು ಆದೇಶಿಸಿತ್ತು. ಈ ಆದೇಶವನ್ನು ಮೈಸೂರು ಜಿಲ್ಲೆಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪುರಸ್ಕರಿಸಿದ್ದರಿಂದ ಆರೋಪಿಗಳು 2019ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ