ಮಂಗಳೂರು ಬಾಂಬ್‌ ಸ್ಫೋಟ: ಗುಪ್ತಚರ, ಗೃಹ ಇಲಾಖೆ ವೈಫಲ್ಯ ಸಾಬೀತು, ಸಿದ್ದು

Published : Nov 21, 2022, 02:30 AM IST
ಮಂಗಳೂರು ಬಾಂಬ್‌ ಸ್ಫೋಟ: ಗುಪ್ತಚರ, ಗೃಹ ಇಲಾಖೆ ವೈಫಲ್ಯ ಸಾಬೀತು, ಸಿದ್ದು

ಸಾರಾಂಶ

ರಾಜ್ಯ ಪೊಲೀಸ್‌ ಮಹಾನಿರ್ದೇಶಕರೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿದ್ದಾರೆ. ಬಾಂಬ್‌ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ: ಸಿದ್ದರಾಮಯ್ಯ 

ಬೆಂಗಳೂರು(ನ.21): ಮಂಗಳೂರು ಬಾಂಬ್‌ ಸ್ಫೋಟ ರಾಜ್ಯದ ಗುಪ್ತಚರ ವಿಭಾಗ ಹಾಗೂ ಗೃಹ ಇಲಾಖೆ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಕಳವಳಕಾರಿ ಘಟನೆ ಕುರಿತು ಪೊಲೀಸರು ತ್ವರಿತಗತಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ರಾಜ್ಯ ಪೊಲೀಸ್‌ ಮಹಾನಿರ್ದೇಶಕರೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿದ್ದಾರೆ. ಬಾಂಬ್‌ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರದ ಬೇಜವಾಬ್ದಾರಿತನ, ಗುಪ್ತಚರ ವಿಭಾಗ, ಗೃಹ ಇಲಾಖೆಯ ವೈಫಲ್ಯವು ಘಟನೆಯಿಂದ ಸಾಬೀತಾಗಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಕಿಡಿಕಾರಿದ್ದಾರೆ.

ಮಂಗಳೂರು ಸ್ಫೋಟ ಭಯೋತ್ಪಾದನಾ ಕೃತ್ಯ: ಡಿಜಿಪಿ ಪ್ರವೀಣ್‌ ಸೂದ್‌ ಸ್ಪಷ್ಟನೆ

ಬಾಂಬ್‌ ಸ್ಫೋಟದ ಬಗ್ಗೆ ಸಾರ್ವಜನಿಕರು ಊಹಾಪೋಹದ ಸುದ್ದಿಗಳನ್ನು ನಂಬಬಾರದು. ಪ್ರಕರಣದಲ್ಲಿ ಉದ್ರಿಕ್ತರಾಗದೆ, ಸಂಯಮ ಮತ್ತು ಎಚ್ಚರದಿಂದ ಇರಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್