ಆ.2ಕ್ಕೆ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ದಲಿತ ಶಾಸಕರ ಮೀಟಿಂಗ್‌

Published : Jul 31, 2025, 07:51 AM IST
Dr G Parameshwar

ಸಾರಾಂಶ

ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಆಗಸ್ಟ್ 2 ರಂದು ದಲಿತ ಸಚಿವರು ಮತ್ತು ಶಾಸಕರ ಸಭೆ. ಒಳಮೀಸಲಾತಿ ಜಾರಿ ಕುರಿತು ಚರ್ಚಿಸಲು ಭೋಜನಕೂಟದ ಹೆಸರಿನಲ್ಲಿ ಸಭೆ ಆಯೋಜನೆ. ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಸಲ್ಲಿಕೆಗೂ ಮುನ್ನವೇ ಸಭೆ.

ಬೆಂಗಳೂರು (ಜುಲೈ.31): ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ನೇತೃತ್ವದಲ್ಲಿ ಆ.2 ರಂದು ದಲಿತ ಸಚಿವರು ಹಾಗೂ ಕಾಂಗ್ರೆಸ್‌ನ ದಲಿತ ಶಾಸಕರ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಭೋಜನಕೂಟದ ಹೆಸರಿನಲ್ಲಿ ಆ.2 ರಂದು ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ಮೂಲಗಳು ತಿಳಿಸಿವೆ.

ಈ ಹಿಂದೆ ದಲಿತ ಸಚಿವರು, ಶಾಸಕರ ಸಭೆ ಕರೆದಿದ್ದಾಗ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ಸಭೆಗಳಿಗೆ ಬ್ರೇಕ್‌ ಬಿದ್ದಿತ್ತು. ಇದೀಗ ಒಳ ಮೀಸಲಾತಿ ಕುರಿತು ಚರ್ಚಿಸುವ ಹೆಸರಿನಲ್ಲಿ ದಲಿತ ಎಡ ಹಾಗೂ ಬಲ ಎರಡೂ ಸಮುದಾಯದ ಶಾಸಕರು ಹಾಗೂ ಸಚಿವರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ದಲಿತ ಸಿಎಂ ಗದ್ದಲ, ಧರ್ಮಸ್ಥಳ ಕೇಸ್, ರಮ್ಯಾ ಡಿಬಾಸ್ ವಾರ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಏನು ಹೇಳಿದ್ರು?

ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿ ಯಾವುದೇ ಕ್ಷಣದಲ್ಲಾದರೂ ಸರ್ಕಾರಕ್ಕೆ ಸಲ್ಲಿಕೆಯಾಗಬಹುದು. ಒಂದು ವೇಳೆ ವರದಿ ಸಲ್ಲಿಕೆಯಾದ ಬಳಿಕ ಶೀಘ್ರ ಒಳ ಮೀಸಲಾತಿ ಜಾರಿ ಮಾಡಲು ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳ ಕುರಿತು ಚರ್ಚಿಸಲು ಸಭೆ ಕರೆದಿರುವುದಾಗಿ ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್