ವಕ್ಫ್ ಹಗರಣ ಬಗ್ಗೆ ಶೀಘ್ರ ದೊಡ್ಡ ಮಟ್ಟದ ತನಿಖೆ: ಸಿಎಂ ಬೊಮ್ಮಾಯಿ

Published : Oct 20, 2022, 12:00 AM IST
ವಕ್ಫ್ ಹಗರಣ ಬಗ್ಗೆ ಶೀಘ್ರ ದೊಡ್ಡ ಮಟ್ಟದ ತನಿಖೆ: ಸಿಎಂ ಬೊಮ್ಮಾಯಿ

ಸಾರಾಂಶ

ಕಾಂಗ್ರೆಸ್‌ನ ಘಟಾನುಘಟಿ ನಾಯಕರುಗಳೇ ಈ ಹಗರಣದ ಹಿಂದಿದ್ದಾರೆ ಎಂಬುದು ಮಣಿಪ್ಪಾಡಿ ಹಾಗೂ ಉಪ ಲೋಕಾಯುಕ್ತರ ತನಿಖಾ ವರದಿಗಳೆರಡರಲ್ಲಿಯೂ ನಮೂದಾಗಿದೆ. ಶೀಘ್ರದಲ್ಲೇ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ 

ಕಲಬುರಗಿ(ಅ.20):  ರಾಜ್ಯದಲ್ಲಿರುವ ಸಾವಿರಾರು ಕೋಟಿ ರು. ಮೌಲ್ಯದ ವಕ್ಫ್ ಆಸ್ತಿಯನ್ನು ಕಾಂಗ್ರೆಸ್‌ ನಾಯಕರು ನುಂಗಿ ನೀರು ಕುಡಿದಿದ್ದಾರೆ. ಈ ಕುರಿತಾದ ಅನ್ವರ್‌ ಮಣಿಪ್ಪಾಡಿ ಹಾಗೂ ಉಪ ಲೋಕಾಯುಕ್ತರ ತನಿಖಾ ವರದಿಗಳೆರಡೂ ಸರ್ಕಾರದ ಮುಂದಿವೆ. ಶೀಘ್ರದಲ್ಲೇ ಈ ಹಗರಣದ ದೊಡ್ಡ ಮಟ್ಟದ ತನಿಖೆಗೆ ಆದೇಶ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಮಹಾಗಾಂವ್‌ನಲ್ಲಿ ಬುಧವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಘಟಾನುಘಟಿ ನಾಯಕರುಗಳೇ ಈ ಹಗರಣದ ಹಿಂದಿದ್ದಾರೆ ಎಂಬುದು ಮಣಿಪ್ಪಾಡಿ ಹಾಗೂ ಉಪ ಲೋಕಾಯುಕ್ತರ ತನಿಖಾ ವರದಿಗಳೆರಡರಲ್ಲಿಯೂ ನಮೂದಾಗಿದೆ. ಶೀಘ್ರದಲ್ಲೇ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗುವುದು. ಹಿಂದುಳಿದ ವರ್ಗ, ಎಸ್ಸಿ, ಎಸ್ಟಿಗೆ ದ್ರೋಹ ಮಾಡಿದಂತೆ ಅಲ್ಪಸಂಖ್ಯಾತರಿಗೂ ಕಾಂಗ್ರೆಸ್‌ನವರು ದ್ರೋಹ ಎಸಗಿದ್ದಾರೆ. ದೊಡ್ಡ, ದೊಡ್ಡ ನಾಯಕರೇ ವಕ್ಫ್ ಆಸ್ತಿಯನ್ನು ತಮ್ಮ ಹೆಸರಿಗೆ, ತಮ್ಮ ಸಹೋದರರ ಹೆಸರಿಗೆ ಬರೆದುಕೊಂಡಿದ್ದಾರೆ. ಅಲ್ಪಸಂಖ್ಯಾತರ ಬಲದಿಂದ ಕಾಂಗ್ರೆಸ್‌ ಪಕ್ಷ ಬೀಗುತ್ತಿದೆ. ವಕ್ಫ್ ಹಗರಣದ ತನಿಖೆ ನಡೆದರೆ ಕೈ ಹಿಡಿದಿರುವ ಅಲ್ಪಸಂಖ್ಯಾತ ಸಮುದಾಯ ಸಹ ಆ ಪಕ್ಷದಿಂದ ದೂರವಾಗೋದು ನಿಶ್ಚಿತ ಎಂದು ಹೇಳಿದರು.

ಕಲ್ಯಾಣ ನಾಡಿನ ಬಗ್ಗೆ ಬಿಜೆಪಿ ಜಾಣ ಕುರುಡು: ಜಗದೇವ ಗುತ್ತೇದಾರ್‌ ವಾಗ್ದಾಳಿ

ಕಾಂಗ್ರೆಸ್‌ನ ಹಗರಣ

ರಾಜ್ಯದಲ್ಲಿ ಸಾವಿರಾರು ಕೋಟಿ ರು. ವಕ್ಫ್ ಆಸ್ತಿಯನ್ನು ಕಾಂಗ್ರೆಸ್‌ ನಾಯಕರು ನುಂಗಿ ನೀರು ಕುಡಿದಿದ್ದಾರೆ. ಈ ಕುರಿತು ಅನ್ವರ್‌ ಮಾಣಿಪ್ಪಾಡಿ ಹಾಗೂ ಉಪಲೋಕಾಯುಕ್ತರ ತನಿಖಾ ವರದಿಗಳೆರಡೂ ಸರ್ಕಾರದ ಬಳಿ ಇವೆ. ಈ ಬಗ್ಗೆ ತನಿಖೆ ನಡೆಸಿದರೆ ಕಾಂಗ್ರೆಸ್‌ನ ಕೈಹಿಡಿದಿರುವ ಅಲ್ಪಸಂಖ್ಯಾತ ಸಮುದಾಯ ಆ ಪಕ್ಷದಿಂದ ದೂರವಾಗುವುದು ನಿಶ್ಚಿತ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ