
ಬೆಂಗಳೂರು(ಜೂ.01): ಯೂನಿಯನ್ ಬ್ಯಾಂಕ್ನಲ್ಲಿ ನಡೆದಿರುವ ವಾಲ್ಮೀಕಿ ನಿಗಮದ 87 ಕೋಟಿ ರು. ಅಕ್ರಮ ಹಣ ವರ್ಗಾ ವಣೆ ಕುರಿತು ಬ್ಯಾಂಕ್ ಈಗಾಗಲೇ ಸಿಬಿಐಗೆ ದೂರು ನೀಡಿದ್ದು, ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದೇ ಕುತೂಹಲ ಮೂಡಿದೆ.
ಆರ್ಬಿಐ ನಿಯಮಗಳ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಮನಿಸಿದರೆ 87 ಕೋಟಿ ರು. ಹಣ ಆಕ್ರಮ ವರ್ಗಾವಣೆಯಾಗಿರುವುದರಿಂದ ಸಹಜವಾಗಿಯೇ ತನಿಖೆಗೆ ಮುಂದಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ, ಆರ್ಬಿಐ ನಿಯಮಗಳ ಪ್ರಕಾರ 25 ರಿಂದ 50 ಕೋಟಿ ರು. ಮೊತ್ತದ ಯಾವುದೇ ಬ್ಯಾಂಕ್ ವಂಚನೆ ಪ್ರಕರಣವನ್ನು ಕಡ್ಡಾಯವಾಗಿ ಸಿಬಿಐನ ವಿಭಾಗ (ಬಿಎಸ್ಎಫ್ಸಿ) ಹಾಗೂ 50 ಕೋಟಿಗೂ ಹೆಚ್ಚಿನ ಮೊತ್ತದ ವಂಚನೆಯನ್ನು ಸಿಬಿಐ ಜಂಟಿ ನಿರ್ದೇಶಕರೇ ತನಿಖೆ ನಡೆಸಬೇಕು.
ನಾಗೇಂದ್ರ ವಿರುದ್ಧದ ಆರೋಪದ ವಾಸ್ತವಾಂಶ ಪರಿಶೀಲನೆ: ಡಿ.ಕೆ. ಶಿವಕುಮಾರ್
ಇನ್ನು 100 ಕೋಟಿಗೂ ಹೆಚ್ಚು ಮೊತ್ತದ ಕಡ್ಡಾಯವಾಗಿ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಈ ಪ್ರಕರಣದಲ್ಲಿ 87 ಕೋಟಿ ರು.ಗಳ ಅವ್ಯವಹಾರ ನಡೆದಿದ್ದು, ಬ್ಯಾಂಕಿಂಗ್ ಅವ್ಯವಹಾರ ಆಗಿರುವುದರಿಂದ ಆರ್ಬಿಐನಿಯಮಗಳ ಪ್ರಕಾರ ಸಿಬಿಐ ತನಿಖೆಗೆ ಮುಂದಾಗುವ ಸಾಧ್ಯತೆಯೇ ಹೆಚ್ಚು. ಹೀಗಾದಲ್ಲಿ ರಾಜ್ಯ ಸರ್ಕಾರವು ಪ್ರಕರಣದ ತನಿಖೆಗೆ ನೇಮಕ ಮಾಡಿರುವ ಎಸ್ಐಟಿ ಹಾಗೂ ಸಿಬಿಐ ಎರಡೂ ತನಿಖಾ ಸಂಸ್ಥೆಗಳೂ ಒಂದೇ ಸಮಯದಲ್ಲಿ ತನಿಖೆ ನಡೆಯುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ