
ಬೆಂಗಳೂರು (ಜೂ.3): ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಕರಡಿ ಗ್ರಾಮದ ಆರ್ಸಿಬಿ ಅಭಿಮಾನಿಗಳು ತಮ್ಮ ತಂಡದ ಗೆಲುವಿಗಾಗಿ ಬಸವಣ್ಣ ದೇವರ ಮೊರೆ ಹೋಗಿದ್ದಾರೆ.
ಅಭಿಮಾನಿಗಳು ದೇವರಿಗೆ 101 ತೆಂಗಿನಕಾಯಿಗಳನ್ನು ಒಡೆದು, ಆರ್ಸಿಬಿ ಕಪ್ ಎತ್ತಿ ಹಿಡಿಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 'ಈ ಬಾರಿ ಕಪ್ ನಮ್ದೇ' ಎಂಬ ಘೋಷಣೆಯೊಂದಿಗೆ, ಗ್ರಾಮದ ಯುವಕರು ಮತ್ತು ಅಭಿಮಾನಿಗಳು ಒಟ್ಟಾಗಿ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಪಂದ್ಯದ ಫಲಿತಾಂಶಕ್ಕಾಗಿ ಎಲ್ಲರ ಕಣ್ಣು ಟಿವಿ ಪರದೆಯತ್ತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ