
ಬೆಂಗಳೂರು [ಮಾ.13]: ಹಿರಿಯ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ತೀವ್ರ ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚರಣ್ ರೆಡ್ಡಿ [55] ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಆಂಧ್ರ ಪ್ರದೇಶದ ಚಿತ್ತೂರಿನವರಾದ ಚರಣ್ ರೆಡ್ಡಿ 1933ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಎಸ್ ಐ ಟಿ, ಸಿಬಿಐನಲ್ಲಿಯೂ ಚರಣ್ ರೆಡ್ಡಿ ಕಾರ್ಯನಿರ್ವಹಿಸಿದ್ದರು.
ಮಧುಕರ ಶೆಟ್ಟಿ ನಿಗೂಢ ಸಾವಿನ ತನಿಖೆಗೆ ಸಮಿತಿ ರಚನೆ...
2016ರಲ್ಲಿ ಬೆಂಗಳೂರು ಉತ್ತರ ವಲಯದ ಐಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸಿದ್ದರು.
ಪ್ರಾಮಾಣಿಕ ಅಧಿಕಾರಿಯ ಹೆಮ್ಮೆಯ ಸತ್ಯಗಳು: ಇದು ಸಿಂಹದ ಹೆಜ್ಜೆ...!.
ದಿಟ್ಟ ಅಧಿಕಾರಿಯಾಗಿದ್ದ ಚರಣ್ ರೆಡ್ಡಿ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ