
ಬೆಂಗಳೂರು, (ಮೇ.10): ಕೊರೋನಾ ಆತಂಕದ ಮಧ್ಯೆ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೂ ಕೊರೋನಾ ಕಾಡತೊಡಗಿದೆ.
ಹೌದು..ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ರವಿ ಡಿ ಚೆನ್ನಣ್ಣನವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದ ಮಾಜಿ ಶಾಸಕ ಕೊರೋನಾಗೆ ಬಲಿ
ಈ ಕುರಿತಂತೆ ಟ್ವಿಟ್ಟರ್ನಲ್ಲಿ ತಿಳಿಸಿರುವರವಿ ಡಿ ಚೆನ್ನಣ್ಣನವರ್, ನನಗೂ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ. ಅಲ್ಲದೇ ಸ್ಟೇ ಹೋಂ, ಸ್ಟೇ ಸೇಫ್ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಕೊರೋನಾ ಆತಂಕದ ಮಧ್ಯೆ ಪೊಲೀಸರು ಕುಟುಂಬವನ್ನು ಬಿಟ್ಟು ಹಗಲು ರಾತ್ರಿ ಎನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಎಲ್ಲರೂ ಮನೆಯಲ್ಲೇ ಇರಿ ಕೊರೋನಾವನ್ನು ಕಟ್ಟಿಹಾಕಲು ಕೈಜೋಡಿಸಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ