
ಬೆಂಗಳೂರು (ಅ.29): ಎಡಿಜಿಪಿಯಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಡಿಜಿಪಿ ಹುದ್ದೆಗೆ ಬಡ್ತಿಯೊಂದಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ರಾಜಧಾನಿ ಬೆಂಗಳೂರು ಆಯುಕ್ತರಾಗಿದ್ದ ಟಿ.ಸುನೀಲ್ ಕುಮಾರ್ ಅವರಿಗೆ ನಿವೃತ್ತಿಗೂ ಮುನ್ನ ಒಂದು ದಿನಕ್ಕೆ ಡಿಜಿಪಿಯಾಗಿ ಬಡ್ತಿ ನೀಡಲಾಗಿದೆ ಎಂಬುದು ವಿಶೇಷ.
ಭ್ರಷ್ಟಾಚಾರ ನಿಗ್ರಹದಳದ ಎಡಿಜಿಪಿಯಾಗಿದ್ದ ಸುನೀಲ್ ಕುಮಾರ್ ಅವರಿಗೆ 1 ದಿನದ ಮಟ್ಟಿಗೆ ಬಡ್ತಿ ನೀಡಿ, ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ
ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಯಾಗಿದ್ದ ಅಮರ್ಕುಮಾರ್ ಪಾಂಡೆ ಅವರಿಗೆ ಡಿಜಿಪಿಯಾಗಿ ತರಬೇತಿಗೆ ವರ್ಗಾವಣೆ ಮಾಡಲಾಗಿದ್ದು, ಅಮರ್ ಪಾಂಡೆ ಅವರಿಂದ ತೆರವಾದ ಸ್ಥಳಕ್ಕೆ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ